LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

10 ರಾಜ್ಯದ 37 ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ. ದಿನಾಂಕ ಘೋ‍ಷಣೆ

Advertisement
ನವದೆಹಲಿ : ಕೇಂದ್ರ ಚುನಾವಣಾ ಆಯೋಗ 10 ರಾಜ್ಯದ 37 ರಾಜ್ಯಸಭಾ ಸ್ಥಾನಕ್ಕೆ ಚುನಾವಣೆಯನ್ನು ಘೋ‍ಷಣೆ ಮಾಡಿದೆ. ಮಾರ್ಚ್ 16ರಂದು ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯ ಬಳಿಕ ಮತ ಎಣಿಕೆ ನಡೆಯಲಿದೆ.ಏಪ್ರಿಲ್ 2026ರಲ್ಲಿ 10 ರಾಜ್ಯಗಳ 37 ರಾಜ್ಯಸಭಾ ಸದಸ್ಯರ ಅವಧಿ ಪೂರ್ಣಗೊಳ್ಳಲಿದೆ.

ತೆರವಾಗುವ ಸ್ಥಾನಗಳಿಗೆ ಚುನಾವಣೆಯನ್ನು ನಡೆಸಲು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಣೆ ಮಾಡಿದೆ.

ಫೆಬ್ರವರಿ 26ರಂದು ರಾಜ್ಯಸಭೆ ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಮಾರ್ಚ್ 5 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮಾರ್ಚ್ 6ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಮಾರ್ಚ್ 9 ಕೊನೆಯ ದಿನವಾಗಿದೆ.

ಮಾರ್ಚ್ 16ರಂದು ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯ ಬಳಿಕ ಮತ ಎಣಿಕೆ ಮಾಡಲಾಗುತ್ತದೆ. ಮಾರ್ಚ್ 20ರಂದು ರಾಜ್ಯಸಭೆ ಚುನಾವಣೆಯ ಸಂಪೂರ್ಣ ಪಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಯಾವ-ಯಾವ ರಾಜ್ಯಗಳು?; ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಹರ್ಯಾಣ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣ ರಾಜ್ಯದ 37 ಸೀಟುಗಳಿಗೆ ಚುನಾವಣೆ ನಡೆಯಲಿದೆ.

ರಾಜ್ಯಸಭೆ ಚುನಾವಣೆ ವೇಳಾಪಟ್ಟಿ 37 ಸೀಟು, 10 ರಾಜ್ಯಗಳು

ಫೆಬ್ರವರಿ 26, ಗುರುವಾರ ಚುನಾವಣಾ ಅಧಿಸೂಚನೆ ಪ್ರಕಟ

ಮಾರ್ಚ್ 5, ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆ ದಿನ

ಮಾರ್ಚ್ 6, ಶುಕ್ರವಾರ ನಾಮಪತ್ರಗಳ ಪರಿಶೀಲನೆ

ಮಾರ್ಚ್ 9, ಸೋಮವಾರ ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ

ಮಾರ್ಚ್ 16, ಸೋಮವಾರ ಮತದಾನ (ಬೆಳಗ್ಗೆ 9 ರಿಂದ ಸಂಜೆ 4)

ಮಾರ್ಚ್ 16 ಸೋಮವಾರ ಸಂಜೆ 5 ಗಂಟೆ ಬಳಿಕ ಮತ ಎಣಿಕೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ