LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಟ್ಯಾಂಕ್ ನಲ್ಲಿದ್ದ ವಿಷಕಾರಿ ನೀರು ಸೇವಿಸಿ 12 ಮಕ್ಕಳು ಅಸ್ವಸ್ಥ

Advertisement
ಬೆಳಗಾವಿ: ಶಾಲೆಯಲ್ಲಿರುವ ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ನೀರಿನ ಟ್ಯಾಂಕ್ ಗೆ ಅಪರಿಚಿತ ವ್ಯಕ್ತಿಗಳು  ಕೀಟನಾಶಕ ಬೆರೆಸಿರುವುದು ದೃಢವಾಗಿದೆ. ಇಂದು ಬೆಳಗ್ಗಿನ ಜಾವ 6 ಗಂಟೆಯ ಸುಮಾರಿಗೆ ಟ್ಯಾಂಕ್‌ನಲ್ಲಿ ನೀರು ಸಂಗ್ರಹಿಸಲಾಗಿದೆ.

ಇದೇ ಟ್ಯಾಂಕಿನ ಮೂಲಕ ನೀರು ಸಂಗ್ರಹ ಮಾಡಲಾಗಿದೆ. ಆ ಬಳಿಕವೇ ಕಿಡಿಗೇಡಿಗಳು ಕೀಟನಾಶಕ ಬೆರೆಸಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ನೀರು ಕುಡಿದ ತಕ್ಷಣ ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಶಾಲೆಯಲ್ಲಿ 41 ಮಕ್ಕಳಿದ್ದಾರೆ. ಅಲ್ಲದೇ ಈ ಶಾಲೆಯ ಪಕ್ಕದಲ್ಲೇ 20 ಅಧಿಕ ಮನೆಗಳಿದ್ದು, ಅವರು ಈ ಟ್ಯಾಂಕಿನ ನೀರನ್ನೇ ಅವಲಂಭಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST