LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮದ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚಾದ ಸಂಘರ್ಷ: 22 ಅಂತರಾಷ್ಟ್ರೀಯ ವಿಮಾನಗಳ ಸಂಚಾರ ರದ್ದು

Advertisement
ಬೆಂಗಳೂರು : ಮದ್ಯಪ್ರಾಚ್ಯ (Middle East) ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (KIA) ಹೊರಡಬೇಕಿದ್ದ ಮತ್ತು ಬರಬೇಕಿದ್ದ ಸುಮಾರು 22 ಅಂತರಾಷ್ಟ್ರೀಯ ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಅಬುಧಾಬಿ, ಜಿದ್ದಾ, ದೋಹಾ ಮತ್ತು ದುಬೈ ಸೇರಿದಂತೆ ಪ್ರಮುಖ ಮದ್ಯಪ್ರಾಚ್ಯ ನಗರಗಳಿಗೆ ಸಂಪರ್ಕ ಕಲ್ಪಿಸುವ ವಿಮಾನಗಳು ರದ್ದಾಗಿವೆ.

ಏರ್ ಇಂಡಿಯಾ (Air India), ಎಮಿರೇಟ್ಸ್ (Emirates), ಇಂಡಿಗೋ (IndiGo) ಮತ್ತು ಕತಾರ್ ಏರ್ವೇಸ್ (Qatar Airways) ಸಂಸ್ಥೆಗಳ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಪ್ರಯಾಣಿಕರ ಸಂಕಷ್ಟ: ಇದ್ದಕ್ಕಿದ್ದಂತೆ ವಿಮಾನಗಳು ರದ್ದಾದ ಕಾರಣ ನೂರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಪರದಾಡುವಂತಾಗಿದೆ.

ರೀ-ಸ್ಕೆಡ್ಯೂಲ್ ಅವಕಾಶ:

ವಿಮಾನ ರದ್ದತಿಯಿಂದ ತೊಂದರೆಗೊಳಗಾದ ಪ್ರಯಾಣಿಕರಿಗೆ ಆಯಾ ವಿಮಾನಯಾನ ಸಂಸ್ಥೆಗಳು ಈ ಕೆಳಗಿನ ಆಯ್ಕೆಗಳನ್ನು ನೀಡಿವೆ:

ಮರುಹಂಚಿಕೆ (Re-schedule): ಪ್ರಯಾಣಿಕರು ತಮ್ಮ ಪ್ರಯಾಣದ ದಿನಾಂಕವನ್ನು ಉಚಿತವಾಗಿ ಅಥವಾ ಲಭ್ಯತೆಗೆ ಅನುಗುಣವಾಗಿ ಬದಲಾಯಿಸಿಕೊಳ್ಳಬಹುದು.

ರಿಫಂಡ್: ಟಿಕೆಟ್ ಹಣವನ್ನು ವಾಪಸ್ ಪಡೆಯಲು ಅಥವಾ ಮುಂದಿನ ಪ್ರಯಾಣಕ್ಕೆ ಕ್ರೆಡಿಟ್ ಶೆಲ್ ಆಗಿ ಬಳಸಲು ಅವಕಾಶ ನೀಡಲಾಗುತ್ತಿದೆ.

ಸೂಚನೆ: ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಹೊರಡುವ ಮುನ್ನ ತಮ್ಮ ವಿಮಾನದ ಸ್ಥಿತಿಯನ್ನು (Flight Status) ಅಧಿಕೃತ ವೆಬ್‌ಸೈಟ್ ಅಥವಾ ಆಯಪ್ ಮೂಲಕ ಪರಿಶೀಲಿಸಿಕೊಳ್ಳಲು ಸೂಚಿಸಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ