LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

4500 ಕೋಟಿ ರೂ. ವಂಚನೆ ಕೇಸ್ : ಶಿವಾನಂದ ನೀಲಣ್ಣವರ ವಿರುದ್ಧ ಮೊದಲ ದೂರು

Advertisement

ಬೆಳಗಾವಿ: ಬೆಳಗಾವಿಯಲ್ಲಿ ಸದ್ದಿಲ್ಲದೆ ನಡೆದಿದೆ ಎನ್ನಲಾದ ಸುಮಾರು 4500 ಕೋಟಿ ರೂಪಾಯಿಗಳ ಬೃಹತ್ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೊದಲ ಅಧಿಕೃತ ದೂರು ದಾಖಲಾಗಿದೆ. 

ಇಷ್ಟು ದೊಡ್ಡ ಮಟ್ಟದ ಹಗರಣದ ಆರೋಪ ಕೇಳಿಬಂದಿದ್ದರೂ, ಮುಖ್ಯ ಆರೋಪಿ ಶಿವಾನಂದ್ ನೀಲಣ್ಣನವರ್ ವಿರುದ್ಧ ಇದುವರೆಗೆ ಯಾವುದೇ ಸಾರ್ವಜನಿಕರು ಅಥವಾ ಸಂತ್ರಸ್ತರು ಪೊಲೀಸ್ ಠಾಣೆ ಮೆಟ್ಟಿಲೇರದೆ ಇರುವುದು ತೀವ್ರ ಅಚ್ಚರಿ ಮೂಡಿಸಿತ್ತು.ಆದರೆ ಈಗ ಆ ನಿಶ್ಯಬ್ದ ಮುರಿದಿದ್ದು, ಆರೋಪಿಯ ವಿರುದ್ಧ ಮೊದಲ ಎಫ್‌ಐಆರ್ (FIR) ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಯಲ್ಲಿ ಶಿವಾನಂದ್ ನೀಲಣ್ಣನವರ್ ವಿರುದ್ಧ ಮೊದಲ ವಂಚನೆ ಪ್ರಕರಣ ದಾಖಲಾಗಿದೆ. ಕಾಗವಾಡ ಮೂಲದ ಠೇವಣಿದಾರರಾದ ಕೃಷ್ಣ ಅಪ್ಪಣ್ಣ ಅಪ್ರಾಜ್ ಎಂಬುವವರು ಆರೋಪಿಯಿಂದ ವಂಚನೆಗೊಳಗಾದ ದುರ್ದೈವಿ. ತಾವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಅಧಿಕ ಲಾಭದ ಆಸೆಗೆ ಬಿದ್ದು ಕಳೆದುಕೊಂಡಿರುವುದಾಗಿ ಬೇಸರದಿಂದ ಕೃಷ್ಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರುದಾರ ಕೃಷ್ಣ ಅಪ್ರಾಜ್ ಅವರಿಗೆ ಆರೋಪಿ ಶಿವಾನಂದ್ ನೀಲಣ್ಣನವರ್ ವಾರ್ಷಿಕ ಬರೋಬ್ಬರಿ ಶೇ. 36 ರಷ್ಟು ಭಾರಿ ಪ್ರಮಾಣದ ಬಡ್ಡಿ ನೀಡುವುದಾಗಿ ಆಮಿಷ ಒಡ್ಡಿದ್ದ ಎನ್ನಲಾಗಿದೆ. 

ಇಷ್ಟೊಂದು ದೊಡ್ಡ ಮಟ್ಟದ ಲಾಭಾಂಶ ಸಿಗುತ್ತದೆ ಎಂಬ ಮಾತುಗಳನ್ನು ನಂಬಿದ ಕೃಷ್ಣ, ಕಳೆದ ಏಪ್ರಿಲ್ ತಿಂಗಳಿನಲ್ಲಿ ಹಂತ ಹಂತವಾಗಿ ಒಟ್ಟು 5 ಲಕ್ಷ ರೂಪಾಯಿಗಳನ್ನು ಶಿವಾನಂದನ ಬಳಿ ಹೂಡಿಕೆ ಮಾಡಿದ್ದರು.

ಆದರೆ, ಹಣ ಪಡೆದ ನಂತರ ಆರೋಪಿ ಬಡ್ಡಿಯನ್ನೂ ನೀಡದೆ, ಅಸಲನ್ನೂ ಮರಳಿಸದೆ ನಂಬಿಕೆ ದ್ರೋಹ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ