LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

77ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ

Advertisement
ಸಿರುಗುಪ್ಪ : ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯಿತಿ ಹಾಗೂ ನಗರಸಭೆಯ ಸಹಯೋಗದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಯ ನಿಮಿತ್ತ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ತಹಶೀಲ್ದಾರ್ ಆದ ಗೌಸಿಯಾ ಬೇಗಂ ಅವರು ರಾಷ್ಟ್ರೀಯ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿ 1947ರ ಅಗಸ್ಟ್ 15 ರಂದು ನಮಗೆ ಸ್ವಾತ್ಯಂತ್ರ ಲಭಿಸಿದ್ದರೂ ಅನೇಕ ಗಣಗಳಾಗಿ ವಿಂಗಡವಾಗಿತ್ತು.
ನಂತರ ಎಲ್ಲಾ ಗಣಗಳನ್ನು ಒಗ್ಗೂಡಿಸಿ 1950 ಜನವರಿ 26ರಂದು ಗಣತಂತ್ರ ರಾಷ್ಟ್ರವನ್ನಾಗಿಸಲಾಗಿತು.

ದೇಶದಲ್ಲಿನ ವೈವಿದ್ಯತೆಯಲ್ಲಿನ ಏಕತೆ, ಸಮಾನತೆ ಹಿತದೃಷ್ಟಿಯಿಂದ ನಾವೆಲ್ಲರೂ ಒಗ್ಗಟ್ಟಾಗಿ ಇರುತ್ತೇವೆಂದು ಪ್ರತಿಜ್ಞೆಯನ್ನು ಮಾಡೋಣವೆಂದರು.

ಧ್ವಜವಂದನೆ ಸ್ವೀಕರಿಸಿದ ಶಾಸಕ ಬಿ.ಎಮ್.ನಾಗರಾಜ ಅವರು ಮಾತನಾಡಿ ತಾಲೂಕಿನ ಸರ್ವಾಂಗೀಣ ಅಭಿವೃದ್ದಿಗಾಗಿ ಅನೇಕ ಕಾರ್ಯಕ್ರಮಗಳ ಮುಖಾಂತರ ನಾನಾ ಇಲಾಖೆಗಳ ಹಂತ ಹಂತವಾಗಿ ಕಾಮಗಾರಿಗಳನ್ನು ಮುಗಿಸುವ ಪ್ರಯತ್ನ ನಮ್ಮ ಸರ್ಕಾರದ ವತಿಯಿಂದ ಮಾಡುತ್ತಿದ್ದೇವೆ.

ತುಂಗಾಭದ್ರ ಜಲಾಶಯದ ಭವಿಷ್ಯದ ಭದ್ರತೆಗೆಗಾಗಿ ಎರಡನೇ ಬೆಳೆಯ ತ್ಯಾಗ ಮಾಡಿ ಸಹಕರಿಸಿದ ರೈತರಿಗೆ ಜೂನ್ ಇಲ್ಲವೇ ಜುಲೈ ತಿಂಗಳಲ್ಲಿ ತುಂಗಾಭದ್ರ ಜಲಾಶಯದ ಗೇಟ್ ಅಳವಡಿಕೆಯ ಕಾರ್ಯ ಮುಗಿಸಿ ನೀರಾವರಿ ಅನುಕೂಲ ಮಾಡಿಕೊಡಲಾಗುವುದೆಂದು ತಿಳಿಸಿದರು.

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ಸ್ಕೌಟ್ಸ್ ಮತ್ತು ಟ್ರೂಪ್ ಹಾಗೂ ಪೌರ ಕಾರ್ಮಿಕರಿಂದ ಪಥ ಸಂಚಲನ ಜರುಗಿತು.

ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳ ನೃತ್ಯ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಭಾಗಿಯಾದ ವಿದ್ಯಾರ್ಥಿಗಳ ತಂಡಕ್ಕೆ ಪುರಸ್ಕರಿಸಲಾಯಿತು.

ಪಥಸಂಚಲನದಲ್ಲಿ ವಿಜೇತವಾದ ತಂಡಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಮಹಾನ್ ವ್ಯಕ್ತಿಗಳ ವೇಷದಲ್ಲಿನ ಪುಟಾಣಿ ವಿದ್ಯಾರ್ಥಿಗಳು ನೆರೆದವರ ಗಮನ ಸೆಳೆದರು.

ಇದೇ ವೇಳೆ ಪೋಲೀಸ್ ಉಪಾಧೀಕ್ಷಕ ಮಾಲತೇಶ ಕೂನಬೇವ, ಪೌರಾಯುಕ್ತ ಗಂಗಾಧರ, ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕ ವರ್ಗ ಸೇರಿದಂತೆ ಸಾರ್ವಜನಿಕರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ. 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ