LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸುಳ್ಳು ಕೇಸ್: ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ

Advertisement
ಹುಬ್ಬಳ್ಳಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರ ವಿರುದ್ಧ ಕೇಂದ್ರ ಸರ್ಕಾರ ದ್ವೇಷ ರಾಜಕೀಯ ನಡೆಸುತ್ತಿದೆ ಎಂದು ಆರೋಪಿಸಿ ಇಂದು ಮಹಾನಗರ ಜಿಲ್ಲಾ ಹಾಗೂ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಅರವಿಂದ ನಗರದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ನೂರಾರು ಕಾರ್ಯಕರ್ತರನ್ನು ಬಂಧಿಸಿ ತದನಂತರ ಬಿಡುಗಡೆಗೊಳಿಸಿದರು.


ಸತ್ಯಕ್ಕೆ ಸಾವಿಲ್ಲ ಸುಳ್ಳಿಗೆ ಆಯಸ್ಸಿಲ್ಲ ಎಂಬAತೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೋರ್ಟ ಆದೇಶ ನೀಡಿದ್ದರೂ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡು ಬಿಜೆಪಿಯ ದ್ವೇಷದ ರಾಜಕಾರಣ ಖಂಡಿಸಿ ಎಐಸಿಸಿ ನಿರ್ದೇಶನದಂತೆ ರಾಜ್ಯದಾದ್ಯಂತ ಬಿಜೆಪಿ ಕಚೇರಿಗಳ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಡಿಸಿಸಿ ಕಾಂಗ್ರೆಸ್ ಕಚೇರಿಯಿಂದ ಬಿಜೆಪಿ ಕಚೇರಿವರೆಗೆ ಪಾದಯಾತ್ರೆ ಮೂಲಕ ತೆರಳಿ ಘೋಷಣೆ ಕೂಗುತ್ತ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಪ್ರಮುಖರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ವ್ಯಾನ್‌ನಲ್ಲಿ ಕರೆದುಕೊಂಡು ಬಂದು ಹಳೆಯ ಸಿಎಆರ್ ಮೈದಾನದಲ್ಲಿ ಬಿಡುಗಡೆ ಮಾಡಿದರು.


ಮಹಾನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಗ್ರಾಮೀಣ ಅಧ್ಯಕ್ಷ ಅನಿಲಕುಮಾರ ಪಾಟೀಲ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ಡಂಗನವರ, ಬ್ಲಾಕ್ ಅಧ್ಯಕ್ಷ ಶರೀಫ್ ದರಗಾದ, ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ ಪಾಟೀಲ, ಸದಾನಂದ ಡಂಗನವರ, ಪಾಲಿಕೆ ಸದಸ್ಯ ಇಕ್ಬಾಲ್ ನವಲೂರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಮ್ಮ ಬಲೋಗಿ, ಪದಾಧಿಕಾರಿಗಳಾದ ನವೀದ ಮುಲ್ಲಾ, ದೊಡ್ಡರಾಯಪ್ಪ ದೊಡ್ಡಮನಿ, ಈರಣ್ಣ ಹಿರೇಹಾಳ, ಸುನೀತಾ ಹುರಕಡ್ಲಿ, ಮಹ್ಮದ ಅಲಿ ಪಿಂಜಾರ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.
ವಿಪಕ್ಷಗಳ ಮೇಲೆ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ಸೀಳುನಾಯಿಗಳಂತೆ ಬಳಸಿಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಕೋರ್ಟ ಬಿಜೆಪಿಗೆ ಮಂಗಳಾರತಿ ಮಾಡಿದರೂ ಬುದ್ದಿ ಬಂದಿಲ್ಲ ಮತ್ತೆ ನರೆಗಾ ಹೆಸರು ಬದಲಾಯಿಸಲು ಹೊರಟಿದ್ದಾರೆಂದು ಮಹಾನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ ಹೇಳಿದರು.
ಕೇಂದ್ರದ ಸರ್ವಾಧಿಕಾರಿ ಧೋರಣೆ ಮತ್ತು ಪ್ರತಿಪಕ್ಷಗಳನ್ನು ಮುಗಿಸುವ ಹುನ್ನಾರ ಎಂದು ಅನಿಲಕುಮಾರ ಪಾಟೀಲ ಹೇಳಿದರು. ಮಾತನಾಡಿದ ಇತರ ಮುಖಂಡರು ಬಿಜೆಪಿ ದ್ವೇಷ ರಾಜಕೀಯ ಖಂಡಿಸಿದರು.

ವರದಿ:ಸುಧೀರ್ ಕುಲಕರ್ಣಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ