LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೆಪಿಟಿಸಿಎಲ್ ಆವರಣದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ

Advertisement
 

ತುರುವೇಕೆರೆ : ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಕೆಪಿಟಿಸಿಎಲ್ ಆವರಣದಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕೆಪಿಟಿಸಿಎಲ್ ಆವರಣದಲ್ಲಿ ಅಲ್ಲಿನ ಹಲವು ಸಿಬ್ಬಂದಿಗಳು ವಾಸ ಮಾಡುತ್ತಿದ್ದಾರೆ. ಈ ಆವರಣ ದೊಡ್ಡದಿರುವ ಕಾರಣ ಎಲ್ಲಾ ಕಡೆ ಹುಲ್ಲು ಬೆಳೆದಿದೆ. ಬೇಸಿಗೆ ಕಾಲವಾಗಿರುವ ಕಾರಣ ಹುಲ್ಲು ಒಣಗಿದ್ದು ಆಕಸ್ಮಿಕ ಬೆಂಕಿ ತಗುಲಿದ ಕಾರಣ ಕೆಲವೇ ಕ್ಷಣಗಳಲ್ಲಿ ಎಲ್ಲೆಡೆ ಬೆಂಕಿ ಕಾಣಿಸಿಕೊಂಡು ಅಲ್ಲಿದ್ದ ಸಿಬ್ಬಂದಿಗೆ ಭಯ ಉಂಟಾಗಿದೆ.



ಈ ಅನಾಹುತಕ್ಕೆ ವಿದ್ಯುತ್ ಲೈನ್ ಗಳಿಗೆ ಅಲ್ಲಿದ್ದ ಮರಗಳ ರೆಂಬೆ, ಕೊಂಬೆಗಳು ಸ್ಪರ್ಶಿಸಿ ಅದರಿಂದ ಉಂಟಾಗ ಬೆಂಕಿಯ ಕಿಡಿಗೆ ಈ ಅನಾಹುತ ಸಂಬಂಧಿಸಿದೆ. ವಿದ್ಯುತ್ ತಂತಿಗಳ ಮೇಲೆ ರೆಂಬೆ ಕೊಂಬೆಗಳು ಬಿದ್ದಿದ್ದರೂ ಕಂಡೂ ಕಾಣದಂತೆ ಅವುಗಳನ್ನು ಕತ್ತರಿಸಿ ಅನಾಹುತ ತಡೆಗಟ್ಟದ ಬೆಸ್ಕಾಂ ನ ನಿರ್ಲಕ್ಷ್ಯವೇ ಈ ಬೆಂಕಿ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಬೆಂಕಿಯು ಬಹುತೇಕ ಬೆಳೆದಿದ್ದ ಎಲ್ಲಾ ಹುಲ್ಲು, ಗಿಡಗಂಟೆಗಳನ್ನು ನಾಶಪಡಿಸಿದೆ. ಬೆಂಕಿಯ ಕೆನ್ನಾಲಿಗೆ ಕೆಪಿಟಿಸಿಎಲ್ ನಲ್ಲಿದ್ದ ವಿದ್ಯುತ್ ಯಂತ್ರೋಪಕರಣಗಳಿಗೆ, ವಿದ್ಯುತ್ ಲೈನ್, ಕಂಬಗಳಿಗೆ ತಗುಲಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು. ಕೆಪಿಟಿಸಿಎಲ್ ಆವರಣ ಮಾತ್ರವಲ್ಲದೆ ಅಕ್ಕಪಕ್ಕದ ಬಡಾವಣೆಗಳ ಮನೆಗಳಿಗೆ, ಅಂಗಡಿ ಮುಂಗಟ್ಟುಗಳಿಗೂ ಬೆಂಕಿ ತಗುಲುವ ಸಾಧ್ಯತೆ ಇತ್ತು.

ಬೆಂಕಿಯ ಅನಾಹುತ ಕಂಡ ತಕ್ಷಣವೇ ಅಲ್ಲಿನ ಕೆಲ ಸಿಬ್ಬಂದಿ ಅಗ್ನಿಶಾಮಕ ದಳದವರಿಗೆ ಕರೆ ಮಾಡಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ತಕ್ಷಣ ಆಗಮಿಸಿ ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಬೇಸಿಗೆಯ ಬೇಗೆ ತೀವ್ರವಾಗಿದ್ದು, ವಿದ್ಯುತ್ ಲೈನ್ ಗಳಿಗೆ ಮರದ ಕೊಂಬೆಗಳು ತಗುಲದಂತೆ, ಆವರಣದಲ್ಲಿ ಒಣಗಿದ ಹುಲ್ಲಿನ ರಾಶಿಗಳು ಬೆಳೆಯದಂತೆ ಎಚ್ಚರವಹಿಸುವಂತೆ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಸಿಬ್ಬಂದಿಗೆ ಸೂಚಿಸಿದ್ದಾರೆ.

ವರದಿ: ಗಿರೀಶ್ ಕೆ ಭಟ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ