LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
International News

ಲೆಬನಾನ್ ಮೇಲೆ ಇಸ್ರೇಲ್ ಸರಣಿ ವೈಮಾನಿಕ ದಾಳಿ : ಕನಿಷ್ಠ 89 ಜನರು ಸಾವು

Advertisement

ಬೇರೂತ್:ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಮತ್ತಷ್ಟು ದಟ್ಟವಾಗುತ್ತಿದ್ದು, ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ಸರಣಿ ವೈಮಾನಿಕ ದಾಳಿಗಳಲ್ಲಿ ಕನಿಷ್ಠ 89 ಜನರು ಸಾವನ್ನಪ್ಪಿದ್ದಾರೆ. ಈ ಭೀಕರ ದಾಳಿಯಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ.


ಲೆಬನಾನ್‌ನ ದಕ್ಷಿಣ ಭಾಗ ಮತ್ತು ಬೆಕಾ ಕಣಿವೆಯ ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ಸಾವನ್ನಪ್ಪಿದವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ.


ಗಾಯಗೊಂಡವರ ಸಂಖ್ಯೆ ಹೆಚ್ಚಾಗಿರುವುದರಿಂದ ಬೈರೂತ್ ಮತ್ತು ಸುತ್ತಮುತ್ತಲಿನ ಆಸ್ಪತ್ರೆಗಳು ಭರ್ತಿಯಾಗಿದ್ದು, ತುರ್ತು ಚಿಕಿತ್ಸೆ ನೀಡಲು ವೈದ್ಯಕೀಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.


ಉಗ್ರಗಾಮಿ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿಕೊಂಡಿದೆ. ಆದರೆ, ಜನನಿಬಿಡ ಪ್ರದೇಶಗಳ ಮೇಲೆ ದಾಳಿ ನಡೆದಿರುವುದು ಅಂತಾರಾಷ್ಟ್ರೀಯ ವಲಯದಲ್ಲಿ ಆತಂಕ ಮೂಡಿಸಿದೆ.


ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮದ ಮಾತುಕತೆಗಳು ನಡೆಯುತ್ತಿರುವ ಬೆನ್ನಲ್ಲೇ ಇಸ್ರೇಲ್ ಈ ಕಠಿಣ ಕ್ರಮ ಕೈಗೊಂಡಿರುವುದು ಶಾಂತಿ ಸ್ಥಾಪನೆಯ ಪ್ರಯತ್ನಗಳಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ