LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ನಟ ದರ್ಶನ್ ಸೇರಿ ಗಲ್ಲು ಶಿಕ್ಷೆ ವಿಧಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಅಪರಿಚಿತ 

Advertisement
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಸೇರಿ 17 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಅಪರಿಚಿತ ವ್ಯಕ್ತಿಯೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿದ್ದು, ನ್ಯಾಯಾಧೀಶರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತಂತೆ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಕೋರ್ಟ್ ಗೆ ನುಗ್ಗಿದ ಘಟನೆ ನಡೆದಿದೆ.

ಇಂದು ನಟ ದರ್ಶನ್ ಸೇರಿ ಐವರು ಆರೋಪಿಗಳ ಸ್ಥಳಾಂತರ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಕೋರ್ಟ್ ಗೆ ಪತ್ರ ಹಿಡಿದು ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಿದ್ದಾನೆ.

ರೇಣುಕಾಸ್ವಾಮಿ ಕೊಲೆ ಕೇಸ್ ನ 17 ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಅಪರಿಚಿತ ವ್ಯಕ್ತಿ ಹೇಳಿದ್ದಾನೆ.

ಈ ವೇಳೆ ಜಡ್ಜ್ ನೀವು ಯಾರು ಎಂದು ಅಪರಿಚಿತ ವ್ಯಕ್ತಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಉತ್ತರಿಸಿದ ಅಪರಿಚಿತ ವ್ಯಕ್ತಿ ನಾನು ರವಿ ಬೆಳೆಗೆರೆ ಕಡೆಯವನು ಎಂದು ಹೇಳಿದ್ದಾನೆ. ಏನೇ ಇದ್ರೂ ಸರ್ಕಾರದ ಮುಖಾಂತರ ಬರುವಂತೆ ಜಡ್ಜ್ ಸೂಚಿಸಿದ್ದಾರೆ. ನಿಮ್ಮ ಅರ್ಜಿಯನ್ನು ತೆಗೆದುಕೊಂಡು ಹೋಗಿ ಎಂದು ಜಡ್ಜ್ ಹೇಳಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಐವರು ಆರೋಪಿಗಳ ಬಳ್ಳಾರಿ ಜೈಲಿಗೆ ಸ್ಥಳಾಂತರ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶ ಕಾಯ್ದಿರಿಸಿದೆ.

ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳಿಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡದಂತೆ ದರ್ಶನ್ ಸೇರಿದಂತೆ ಎಲ್ಲರೂ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ 64ನೇ ಸಿಸಿಹೆಚ್ ನ್ಯಾಯಾಲಯ ಸೆಪ್ಟೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ