LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕೆಲವೊಮ್ಮ ರಾಜಕೀಯಕ್ಕೆ ಬರಬೇಕು ಅನ್ಸುತ್ತೆ : ನಟ ಸುದೀಪ್ 

Advertisement
ಬೆಂಗಳೂರು: ಕೆಲವೊಮ್ಮ ರಾಜಕೀಯಕ್ಕೆ ಬರಬೇಕು ಅನ್ಸುತ್ತೆ. ನಾನು ರಾಜಕೀಯಕ್ಕೆ ಬಂದ್ರು ಬದಲಾಗಲ್ಲ ಎಂಬುದಾಗಿ ನಟ ಕಿಚ್ಚ ಸುದೀಪ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಇಂದು ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ದರ್ಶನ್ ಜೈಲುಪಾಲು ಸೇರಿದ ವಿಚಾರವಾಗಿ ಮಾತನಾಡಿ, ಖಂಡಿತವಾಗಿ ನಟ ದರ್ಶನ್ ಸಿನಿಮಾಗೆ ಒಳ್ಳೆಯದಾಗಲಿ.ಅವರ ನೋವು ಅವರಿಗೆ ಇರುತ್ತದೆ. ಆ ಬಗ್ಗೆ ಮಾತನಾಡಿದ್ರೆ ತಪ್ಪಾಗುತ್ತದೆ. ಅವರದ್ದು ಏನೇ ಇದ್ರೂ ಕಾನೂನು ಇದೆ, ಸರ್ಕಾರ ನೋಡಿಕೊಳ್ಳುತ್ತದೆ ಎಂದರು.

ನಟ ದರ್ಶನ್, ಸುದೀಪ್ ಮತ್ತೆ ಒಂದಾಗುವ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು, ಸೂರ್ಯನೊಬ್ಬ, ಚಂದ್ರನೊಬ್ಬ. ಎಲ್ಲಿರಬೇಕೋ ಅಲ್ಲಿದ್ದರೇ ಚೆಂದ. ನಾನು ದೂರವಾಗಿದ್ದಕ್ಕೆ ಬೇರಯವರಿಗೆ ಖುಷಿಯಾಗಿದ್ರೆ ಆಗಿರಲಿ ಬಿಡಿ. ನಾವ್ಯಾಕೆ ದೂರ ಆಗಿದ್ದೀವಿ ಎಂಬುದು ನಮಗೆ ಗೊತ್ತಿದೆ. ಅಷ್ಟೇ ಸಾಕು. ಬೇರೆಯವರು ಏನೇ ಮಾತನಾಡಿಕೊಂಡರೂ ನಾನು ತಲೆಕೆಡಿಸಿಕೊಳ್ಳಲ್ಲ ಎಂದರು.

ಧ್ರುವ ಸರ್ಜಾ ನನ್ನ ತಮ್ಮನಿದ್ದಂತೆ. ಡಾಲಿ ನನಗೆ ಬಹಳ ಹತ್ತಿರದ ವ್ಯಕ್ತಿ. ಶಿವಣ್ಣರನ್ನು ತುಂಬಾ ಪ್ರೀತಿಸ್ತೀವಿ. ಸೋ ನಾವೆಲ್ಲ ಚೆನ್ನಾಗಿದ್ದೇವೆ. ಯಾರದ್ದೇ ಸಿನಿಮಾ ಬಂದರೂ ಖುಷಿ ಪಡುತ್ತೇವೆ ಎಂದರು.

ಕೆಲವೊಮ್ಮೆ ರಾಜಕೀಯಕ್ಕೆ ಬರಬೇಕು ಅನ್ನಿಸುತ್ತೆ. ನಾನು ರಾಜಕೀಯಕ್ಕೆ ಬಂದ್ರೂ ಬದಲಾಗಲ್ಲ. ಬದಲಾಗದ ಹಾಗೆ ನನ್ನ ನಟ್ಟು ಟೈಟ್ ಮಾಡ್ಕೋತೀನಿ ಎಂಬುದಾಗಿ ಅಚ್ಚರಿಯ ಹೇಳಿಕೆಯನ್ನು ನೀಡಿದರು.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ