LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Business News

ಇಂದು ಅಕ್ಷಯ ತೃತೀಯ : ₹20,000 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮಾರಾಟ ನಿರೀಕ್ಷೆ

Advertisement
ನವದೆಹಲಿ: ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಇಂದು ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿಯ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದೆ.

ಈ ವರ್ಷ ಅಖಿಲ ಭಾರತೀಯ ವರ್ತಕರ ಒಕ್ಕೂಟ (CAIT) ದೇಶಾದ್ಯಂತ ಸುಮಾರು ₹20,000 ಕೋಟಿ ರೂಪಾಯಿಗಳ ಮೌಲ್ಯದ ಚಿನ್ನಾಭರಣ ಮಾರಾಟವಾಗುವ ನಿರೀಕ್ಷೆಯಿದೆ ಎಂದು ಅಂದಾಜಿಸಿದೆ.

ಮಾರಾಟದಲ್ಲಿ ಏರಿಕೆ: ಕಳೆದ ವರ್ಷ ಅಕ್ಷಯ ತೃತೀಯದಂದು ಸುಮಾರು ₹16,000 ಕೋಟಿ ಮೌಲ್ಯದ ವಹಿವಾಟು ನಡೆದಿತ್ತು. ಈ ಬಾರಿ ಆ ಮೊತ್ತ ₹20,000 ಕೋಟಿಗೆ ಏರುವ ಸಾಧ್ಯತೆಯಿದೆ.

ಟನ್ ಲೆಕ್ಕದಲ್ಲಿ ಮಾರಾಟ: ಈ ವಿಶೇಷ ದಿನದಂದು ದೇಶಾದ್ಯಂತ ಸುಮಾರು 10 ಟನ್ ಚಿನ್ನ ಮತ್ತು 157 ಟನ್ ಬೆಳ್ಳಿ ಮಾರಾಟವಾಗುವ ಅಂದಾಜಿದೆ.

ಬೆಲೆ ಏರಿಕೆಯ ನಡುವೆಯೂ ಬೇಡಿಕೆ: ಚಿನ್ನದ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು 25% ರಷ್ಟು ಏರಿಕೆಯಾಗಿದೆ. ಕಳೆದ ವರ್ಷ 10 ಗ್ರಾಂ ಚಿನ್ನದ ಬೆಲೆ ಸುಮಾರು 1 ಲಕ್ಷ ರೂ. ಇತ್ತು, ಈ ಬಾರಿ ಅದು 1.58ಲಕ್ಷ ರೂ. ದಾಟಿದೆ. ಆದರೂ ಗ್ರಾಹಕರಲ್ಲಿ ಖರೀದಿ ಉತ್ಸಾಹ ಕಡಿಮೆಯಾಗಿಲ್ಲ.

ಬೆಳ್ಳಿ ಬೆಲೆ: ಬೆಳ್ಳಿಯ ಬೆಲೆ ಕೂಡ ಗಣನೀಯವಾಗಿ ಏರಿಕೆಯಾಗಿದ್ದು, ಪ್ರತಿ ಕೆ.ಜಿ.ಗೆ ₹85,000 ಇದ್ದದ್ದು, ಇದೀಗ 2.55 ಲಕ್ಷ ರೂ. ತಲುಪಿದೆ.

ಗ್ರಾಹಕರಲ್ಲಿ ಹಬ್ಬದ ಸಂಭ್ರಮ:

ಸೋಮವಾರವಾದ ಇಂದು ಮುಂಜಾನೆಯಿಂದಲೇ ಜ್ಯುವೆಲ್ಲರಿ ಮಳಿಗೆಗಳ ಮುಂದೆ ಜನಜಂಗುಳಿ ಕಂಡುಬರುತ್ತಿದೆ. ಅಕ್ಷಯ ತೃತೀಯದಂದು ಚಿನ್ನ ಅಥವಾ ಬೆಳ್ಳಿಯನ್ನು ಖರೀದಿಸುವುದು ಅದೃಷ್ಟ ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಣ್ಣ ಪ್ರಮಾಣದ ನಾಣ್ಯಗಳಿಂದ ಹಿಡಿದು ಭಾರೀ ಆಭರಣಗಳವರೆಗೆ ವಿವಿಧ ಮಾದರಿಯ ವಸ್ತುಗಳನ್ನು ಜನರು ಖರೀದಿಸುತ್ತಿದ್ದಾರೆ.

ವ್ಯಾಪಾರಿಗಳ ಪ್ರಕಾರ, ಈ ಬಾರಿ ಆಭರಣಗಳ ಜೊತೆಗೆ 'ಡಿಜಿಟಲ್ ಗೋಲ್ಡ್' ಮತ್ತು ಗೋಲ್ಡ್ ಇಟಿಎಫ್‌ಗಳ ಮೇಲೆಯೂ ಹೂಡಿಕೆದಾರರು ಆಸಕ್ತಿ ತೋರಿಸುತ್ತಿದ್ದಾರೆ. ಒಟ್ಟಾರೆಯಾಗಿ, ಬೆಲೆ ಏರಿಕೆಯ ಬಿಸಿಯ ನಡುವೆಯೂ ಅಕ್ಷಯ ತೃತೀಯದ ನಿಮಿತ್ತ ಮಾರುಕಟ್ಟೆಯಲ್ಲಿ ಹಬ್ಬದ ಕಳೆ ಮನೆಮಾಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ