LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಚಿಲಕಲನೇರ್ಪು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಬೆಳ್ಳಿ ರಥದಲ್ಲಿ ಮೆರವಣಿಗೆ

Advertisement
ಚೇಳೂರು: ತಾಲೂಕಿನ ಚಿಲಕಲನೇರ್ಪು ಗ್ರಾಮದಲ್ಲಿ ಬುಧವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಗ್ರಾಮದ ಅಂಬೇಡ್ಕರ್ ಯುವಕರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ದಲಿತಪರ ಸಂಘಟನೆಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ, ಯುವಕರ ಬಳಗದಿಂದ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಸುಂದರವಾಗಿ ಅಲಂಕರಿಸಿದ್ದ ಬೆಳ್ಳಿ ರಥದಲ್ಲಿಟ್ಟು ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ಯುವಕರು 'ಜೈ ಭೀಮ್' ಘೋಷಣೆಗಳನ್ನು ಕೂಗುತ್ತಾ, ಅಂಬೇಡ್ಕರ್ ಅವರ ಕ್ರಾಂತಿಗೀತೆಗಳಿಗೆ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು. ಮಹಿಳೆಯರು ಮತ್ತು ಮಕ್ಕಳು ಮೆರವಣಿಗೆಯಲ್ಲಿ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳೆ ನೀಡಿದರು.



ಈ ಸಂದರ್ಭದಲ್ಲಿ ಕುರ್ಲ ಕದಿರಪ್ಪ, ಗಿನ್ನಿ ಶ್ರೀನಿವಾಸ್, ಪಂಚಾಯಿತಿ ಮಾಜಿ ಅಧ್ಯಕ್ಷರಾದ ಜಿ.ಎಸ್. ರಾಮಾಂಜನೇಯ ಹಾಗೂ ಭಾಗ್ಯಮ್ಮ, ಬಿಎಸ್ಪಿ ಮುಖಂಡ ವೆಂಕಟರವಣ, ಪೋಸ್ಟ್ ಮಧುಸೂದನ, ವಿ. ರಾಮಾಂಜನೇಯ, ಬಳ್ಳಾರಿ ನರಸಿಂಹ, ಚಿಕ್ಕ ನರಸಿಂಹ, ಪೋಸ್ಟ್ ಮಾಸ್ಟರ್ ನರಸಿಂಹಪ್ಪ, ಮಾಜಿ ನಂಬರ್ ಅಂಜಿ, ಚಂದ್ರಮೌಲಿ, ವಾಟರ್ ಮ್ಯಾನ್ ನಾರಾಯಣಪ್ಪ, ಸಂಗಪ್ಪ ಸೇರಿದಂತೆ ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ವರದಿ :ಯಾರಬ್. ಎಂ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ