Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇರಳ ದೇಗುಲಗಳಿಗೆ 12 ಕೋಟಿ ರೂ. ನೆರವು ನೀಡಿದ ಅನಂತ್ ಅಂಬಾನಿ

Advertisement
ಮುಂಬೈ: ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ‌ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಂತ್‌ ಅಂಬಾನಿ ಅವರು ಕೇರಳದ ಅತ್ಯಂತ ಪ್ರಸಿದ್ಧ ದೇವಾಲಯ ಗಳಾದ ತಳಿಪರಂಬ ರಾಜರಾಜೇಶ್ವರ ದೇವಸ್ಥಾನ ಮತ್ತು ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಈ ಎರಡು ದೇವಾಲಯಗಳಿಗೆ ತಲಾ 3 ಕೋಟಿ ರೂ.ಗಳಂತೆ 6 ಕೋಟಿ ರೂ.ಗಳನ್ನು ದೇಣಿಗೆಯಾಗಿ ಸಮರ್ಪಿಸಿದರು.

ಇನ್ನು ರಾಜರಾಜೇಶ್ವರ ದೇಗುಲದ ನವೀಕರಣಕ್ಕಾಗಿ 12 ಕೋಟಿ ರೂ.ಗಳ ಆರ್ಥಿಕ ನೆರವನ್ನು ಘೋಷಿಸಿದರು. ಗುರುವಾಯೂರು ಶ್ರೀ ಕೃಷ್ಣನ ಸನ್ನಿಧಾನದಲ್ಲಿರುವ ಆನೆಗಳ ಕ್ಷೇಮಾ ಭಿವೃದ್ಧಿಗಾಗಿ ಹೆಚ್ಚುವರಿ ಆರ್ಥಿಕ ನೆರವನ್ನು ಅನಂತ್‌ ಅಂಬಾನಿ ಪ್ರಕಟಿಸಿದರು.

ಏಪ್ರಿಲ್‌ 2ರಂದು ರಾತ್ರಿ 8 ಗಂಟೆಗೆ ತಳಿಪರಂಬದ ಐತಿಹಾಸಿಕ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅನಂತ್‌ ಅಂಬಾನಿ ಅವರು ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರು ಸಾಂಪ್ರದಾಯಿಕ ಸೇವೆಗಳಾದ ಪೊನ್ನುಂಕುಡಂ, ಪಟ್ಟಂ, ತಾಲಿ, ನೆಯ್ನಾಮೃತು ಅರ್ಪಿಸಿ ಅಶ್ವಮೇಧ ನಮಸ್ಕಾರವನ್ನು ನೆರವೇರಿಸಿದರು.

ದೇವಾಲಯದ ಪ್ರಸ್ತುತ ನಡೆಯುತ್ತಿರುವ ನವೀಕರಣ ಕಾಮಗಾರಿಗಳಿಗಾಗಿ ಮೊದಲ ಹಂತದಲ್ಲಿ 3 ಕೋಟಿ ರೂಪಾಯಿಗಳ ಚೆಕ್‌ ಅನ್ನು ಹಸ್ತಾಂತರಿಸಿದರು. ರಾಜರಾಜೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಅಂಬಾನಿ ಅವರು ಒಟ್ಟು 12 ಕೋಟಿ ರೂಪಾಯಿಗಳ ಕೊಡುಗೆ ನೀಡುವುದಾಗಿ ತಿಳಿಸಿದ್ದಾರೆ.

ಈ ದೇಣಿಗೆಯಿಂದ ದೇವಸ್ಥಾನದ ಪುರಾತನ ಪೂರ್ವ ಗೋಪುರವನ್ನು ಪುನರ್‌ ನಿರ್ಮಿಸಲಾಗುವುದು. ಸುಮಾರು ಎರಡು ಶತಮಾನಗಳಿಂದ ಶಿಥಿಲಾವಸ್ಥೆ ಯಲ್ಲಿದ್ದ ಈ ಗೋಪುರವು ದೇವಸ್ಥಾನದಷ್ಟೇ ಪುರಾತನವಾದ ಇತಿಹಾಸ ಮತ್ತು ವಾಸ್ತುಶಿಲ್ಪವನ್ನು ಹೊಂದಿದೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್