LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕೊಟ್ಟ ಸಾಲ ಕೇಳಿದ್ದಕ್ಕೆ ನಂದಗಡದ ಅಂಗನವಾಡಿ ಶಿಕ್ಷಕಿ ಕೊಲೆ

Advertisement
ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು 5 ಲಕ್ಷ ಹಣ ವಾಪಸ್ ಕೇಳಿದ್ದಕ್ಕೆ ಅಂಗನವಾಡಿ ಶಿಕ್ಷಕಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಖಾನಾಪುರ ತಾಲೂಕಿನ ನಂದಗಡದ ಅಶ್ವಿನಿ ಪಾಟೀಲ್ ಎನ್ನುವ ಅಂಗನವಾಡಿ ಶಿಕ್ಷಕಿಯನ್ನ ಕೊಲೆ ಮಾಡಲಾಗಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದ ನಿವಾಸಿ ಎಂದು ತಿಳಿದುಬಂದಿದೆ.

ಅಂಗನವಾಡಿ ಶಿಕ್ಷಕಿ ಅಶ್ವಿನಿ ಜೊತೆಗೆ ಶಂಕರ್ ಪಾಟೀಲ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಆತನಿಗೆ 5 ಲಕ್ಷ ರೂಪಾಯಿ ಸಾಲ ನೀಡಿದ್ದರು.

ಅಶ್ವಿನಿ ಗೌಡ ಬಳಿ 5 ಲಕ್ಷ ರೂಪಾಯಿ ಶಂಕರಗೌಡ ಪಾಟೀಲ್ ಸಾಲ ಪಡೆದಿದ್ದ. ಆದರೆ ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಕೋಪಗೊಂಡಿದ್ದ ಶಂಕರ್ ಪಾಟೀಲ್ ಜಾತ್ರೆಗೆ ಅಂತ ಕರೆದುಕೊಂಡು ಹೋಗಿ ಅಶ್ವಿನಿ ಪಾಟೀಲ್ ಕೊಲೆ ಮಾಡಿದ್ದಾನೆ.

ಇದೀಗ ಪೊಲೀಸರು ಶಂಕರ್ ಪಾಟೀಲ್ ಅನ್ನು ಅರೆಸ್ಟ್ ಮಾಡಿದ್ದಾರೆ. ಅಕ್ಟೋಬರ್ 2 ರಂದು ಹತ್ಯೆಗೈದು ನಾಟಕ ಮಾಡಿದ್ದ. ಕಕ್ಕೇರಿ ಬಿಷ್ಟಾದೇವಿ ಜಾತ್ರೆಗೆ ಅಕ್ಟೋಬರ್ 2ರಂದು ಅಶ್ವಿನಿ ತೆರಳಿದ್ದರು.

ಜಾತ್ರೆಗೆ ಹೋಗಿ ಮನೆಗೆ ಅಶ್ವಿನಿ ವಾಪಸ್ ಬಂದಿಲ್ಲ ಈ ಕುರಿತು ಕುಟುಂಬದವರು ನಂದಗಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಕೇಸ್ ದಾಖಲಾದ ನಾಲ್ಕು ದಿನದಲ್ಲಿ ಅರಣ್ಯದಲ್ಲಿ ಅಶ್ವಿನಿ ಶವ ಪತ್ತೆಯಾಗಿದೆ.

ಕಾರವಾರದ ರಾಮನಗರದ ಅರಣ್ಯದಲ್ಲಿ ಮೃತ ದೇಹ ಪತ್ತೆಯಾಗಿದೆ. ಶವ ಪತ್ತೆಯಾಗುತ್ತಿದ್ದಂತೆ ನಂದಗಡ ಕಡೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಜಾತ್ರೆಗೆ ಕರೆದೋಯ್ದ ಶಂಕರ್ ಪಾಟೀಲ್ ಅನ್ನು ವಿಚಾರಣೆ ಮಾಡಿದಾಗ ತಾನೇ ಕೊಲೆ ಮಾಡಿ ಶವ ಬಿಸಾಡಿ ಬಂದಿದ್ದಾಗಿ ತಪ್ಪು ಕೊಂಡಿದ್ದಾನೆ.

ಅಶ್ವಿನಿ ಗಂಡನಿಗೆ 30 ವರ್ಷದಿಂದ ಗೋವಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಗ ಕೂಡ ಬೇರೆ ಊರಲ್ಲಿ ಕೆಲಸ ಮಾಡುತ್ತಿದ್ದ. ಶಂಕರ್ ಗೌಡ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದು ಅಶ್ವಿನಿ ಜೊತೆಗೆ ಸ್ನೇಹ ಬೆಳೆದಿದೆ.

ಮನೆ ಕಟ್ಟುವ ವೇಳೆ ಶಂಕರ್ ಅಶ್ವಿನಿಗೆ ಪರಿಚಯವಾಗಿದ್ದಾನೆ ಅಶ್ವಿನಿಗೆ ಸಹಾಯ ಮಾಡುತ್ತ ಶಂಕರ್ ಹಾಗೆ ಜೊತೆಗೆ ಸ್ನೇಹ ಬೆಳೆಸಿದ್ದಾನೆ. ಇಬ್ಬರ ಸ್ನೇಹ ಅಕ್ರಮ ಸಂಬಂಧವರೆಗೂ ಮುಂದುವರೆದಿತ್ತು. ಇದೀಗ 5 ಲಕ್ಷ ಹಣ ವಾಪಸ್ ಹೇಳಿದ್ದಕ್ಕೆ ಶಂಕರ್ ಪಾಟೀಲ್ ಅಶ್ವಿನಿ ಪಾಟೀಲ್ ಅನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ