LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಾದಾಮಿ ಅಮವಾಸ್ಯೆ ನಿಮಿತ್ತ ಈರಣ್ಣ ಸ್ವಾಮಿ ದೇವಸ್ಥಾನದಲ್ಲಿ ಅನ್ನದಾಸೋಹ

Advertisement

ಸಿರುಗುಪ್ಪ : ನಗರದ 19ನೇ ವಾರ್ಡಿನಲ್ಲಿರುವ ಶ್ರೀ ಉರುಕುಂದಿ ಈರಣ್ಣ ಸ್ವಾಮಿ ದೇವಸ್ಥಾನದಲ್ಲಿ ಬಾದಾಮಿ ಅಮವಾಸ್ಯೆ ನಿಮಿತ್ತ ವೈಶ್ಯ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ಯು.ಈರಯ್ಯ ಶೆಟ್ಟಿ ಅವರ ಕುಟುಂಬದಿಂದ ಅನ್ನ ದಾಸೋಹ ಕಾರ್ಯಕ್ರಮ ಜರುಗಿತು. ದೇವಸ್ಥಾನ ಸಮಿತಿಯಿಂದ ದಾನಿಗಳನ್ನು ಸನ್ಮಾನಿಸಲಾಯಿತು.ಬಾದಾಮಿ ಅಮವಾಸ್ಯೆ ನಿಮಿತ್ತ ದೇವಸ್ಥಾನದಲ್ಲಿ ಪಂಚಾಭಿಷೇಕ, ವಿವಿಧ ಫಲಪುಷ್ಪಗಳ ಅಲಂಕಾರ, ಮಹಾಮಂಗಳಾರತಿ, ಹಾಗೂ ಪಲ್ಲಕ್ಕಿ ಸೇವೆ ಜರುಗಿದ್ದು, ಹಲವಾರು ಭಕ್ತರು ಭಾಗಿಯಾಗಿ ದೇವರ ಹರಕೆ ತೀರಿಸಿದರು.
news_1778929642_0_409.webp

 


 
ದಾಸೋಹ ದಾನಿಗಳಾದ ಯು.ಈರಯ್ಯ ಶೆಟ್ಟಿ, ಅವರು ಮಾತನಾಡಿ ಪ್ರತಿ ಅಮವಾಸ್ಯೆಯು ಇಲ್ಲಿ ದಾನಿಗಳ ನೆರವಿನಿಂದ ಅನ್ನದಾಸೋಹ ಜರುಗಲಿದ್ದು, ಈ ಸ್ವಾಮಿಯ ಅನುಗ್ರಹದಿಂದ ನಮ್ಮ ಕುಟುಂಬಕ್ಕೆ ಒಳಿತಾಗಿದ್ದು, ಇಂದು ನಮ್ಮ ಕುಟುಂಬ ಸಮೇತ ಬಂದು ಪಲ್ಲಕ್ಕಿ ಸೇವೆ, ದಾಸೋಹ ಸೇವೆ ಮಾಡಿರುವುದಾಗಿ ತಿಳಿಸಿದರು.
 

ರಂಗನಾಥ ಶೆಟ್ಟಿ ಅವರು ಮಾತನಾಡಿ ಅಪಾರ ಭಕ್ತವೃಂದವನ್ನು ಹೊಂದಿರುವ ಶ್ರೀ ಈರಣ್ಣ ಸ್ವಾಮಿಯ ಸೇವೆಗೈಯಲೆಂದು ನಗರದ ವಿವಿಧ ವಾರ್ಡ್ಗಳಿಂದ ಬಂದು ತಮ್ಮ ಕೈಲಾದ ಸೇವೆಯಲ್ಲಿ ಭಾಗಿಯಾಗುತ್ತಾರೆಂದರು.
 ಯಾರಾದರೂ ಮುಂದಿನ ಅಮವಾಸ್ಯೆಗೆ ದಾಸೋಹ ಮಾಡುವ ಇಚ್ಚೆಯುಳ್ಳ ಭಕ್ತರು ಮೊದಲೇ ತಿಳಿಸಿದಲ್ಲಿ ಅವರ ಸೇವೆಗೆ ಅನುವು ಮಾಡಿಕೊಡಲಾಗುವುದೆಂದು ಆರ್ಚಕ ಶರಣಯ್ಯಸ್ವಾಮಿ ತಿಳಿಸಿದರು.
 
ಇದೇ ವೇಳೆ ದೇವಸ್ಥಾನ ಅಭಿವೃದ್ದಿ ಟ್ರಸ್ಟಿನ ಅಧ್ಯಕ್ಷ ಬಿ.ಸುರೇಶರೆಡ್ಡಿ, ಉಪಾಧ್ಯಕ್ಷ ಎಳ್ಳಾರ್ತಿ ವೀರೇಶ, ಪದಾಧಿಕಾರಿಗಳಾದ ಮಲ್ಲಿಕಾರ್ಜುನ, ಬದ್ರಿನಾಥ, ಗುರುರಾಜ, ಟಿ.ಎಮ್.ಆರ್.ಶ್ರೀನಿವಾಸ, ಇನ್ನಿತರ ದಾನಿಗಳು ಹಾಗೂ ಭಕ್ತರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ