LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Advertisement

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮೇ 12ರಂದು ನಡೆದಿದ್ದ ಈ ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ನೊಂದ ವಿದ್ಯಾರ್ಥಿನಿಯು ತನ್ನ ಕಾಲೇಜು ಸಮಯದ ಬಳಿಕ ಬಿಡುವಿನ ವೇಳೆಯಲ್ಲಿ ಮೊಮೋಸ್ ಅಂಗಡಿಯೊಂದನ್ನು ನಡೆಸುತ್ತಿದ್ದಳು ಎನ್ನಲಾಗಿದೆ.

ಆದರೆ ಇತ್ತೀಚೆಗೆ ಅಂಗಡಿಯು ನಷ್ಟದಲ್ಲಿದ್ದ ಕಾರಣ, ಅದನ್ನು ಮಾರಾಟ ಮಾಡಲು ಆಕೆ ನಿರ್ಧರಿಸಿದ್ದಳು. ಈ ವೇಳೆ ಅಂಗಡಿ ಮಾರಾಟದ ವ್ಯವಹಾರಕ್ಕಾಗಿ ಮಧ್ಯವರ್ತಿಯಾಗಿ (ಬ್ರೋಕರ್) ಹೈನಾಸ್ ಎಂಬಾತ ವಿದ್ಯಾರ್ಥಿನಿಯ ಸಂಪರ್ಕಕ್ಕೆ ಬಂದಿದ್ದನು.

ಅಂಗಡಿಯನ್ನು ಖರೀದಿಸಲು ಘೋಷ್ ಮತ್ತು ಅತುಲ್ ಎಂಬುವವರು ಮುಂದೆ ಬಂದಿದ್ದು, ವ್ಯವಹಾರಕ್ಕೆ ಸಂಬಂಧಿಸಿದಂತೆ ಎಲ್ಲಾ ಸಿದ್ಧತೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಘೋಷ್, ಅತುಲ್, ಬ್ರೋಕರ್ ಹೈನಾಸ್ ಮತ್ತು ವಿದ್ಯಾರ್ಥಿನಿ ನಾಲ್ವರೂ ಸೇರಿ ಪಾರ್ಟಿ ಆಯೋಜಿಸಿದ್ದರು. 

ಪಾರ್ಟಿ ನಡೆಯುತ್ತಿದ್ದಾಗ ಊಟ ತರುವುದಕ್ಕಾಗಿ ಅತುಲ್ ಮತ್ತು ಘೋಷ್ ಇಬ್ಬರೂ ಹೊರಗಡೆ ಹೋಗಿದ್ದಾರೆ. ಈ ಒಂಟಿ ಸಮಯವನ್ನು ಬಳಸಿಕೊಂಡ ಹೈನಾಸ್, ವಿದ್ಯಾರ್ಥಿನಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಘೋರ ಕೃತ್ಯದ ಬಳಿಕ ಸಂತ್ರಸ್ತೆ ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ, ಪೊಲೀಸರು ಆರಂಭದಲ್ಲಿ ಪ್ರಕರಣವನ್ನು ಅತ್ಯಂತ ಬೇಜವಾಬ್ದಾರಿತನದಿಂದ ನಿರ್ಲಕ್ಷಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೆ, ನ್ಯಾಯ ಕೇಳಲು ಹೋದ ಯುವತಿಯನ್ನೇ ಪೊಲೀಸರು ಹೀಯಾಳಿಸಿ ಕಳುಹಿಸಿದ್ದರು ಎನ್ನಲಾಗಿದೆ.

ಸ್ಥಳೀಯ ಪೊಲೀಸರಿಂದ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ, ಧೃತಿಗೆಡದ ಸಂತ್ರಸ್ತೆಯು ಹಿರಿಯ ಪೊಲೀಸ್ ಅಧಿಕಾರಿಗಳ ಮೊರೆ ಹೋಗಿ ತನಗಾದ ಅನ್ಯಾಯವನ್ನು ವಿವರಿಸಿದ್ದಾಳೆ.

ಹಿರಿಯ ಅಧಿಕಾರಿಗಳ ಹಸ್ತಕ್ಷೇಪದ ಬಳಿಕ ಎಚ್ಚೆತ್ತುಕೊಂಡ ಮಡಿವಾಳ ಠಾಣಾ ಪೊಲೀಸರು, ಇದೀಗ ಆರೋಪಿ ಹೈನಾಸ್ ವಿರುದ್ಧ ಅಧಿಕೃತವಾಗಿ ಎಫ್‌ಐಆರ್ (FIR) ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ