LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶಿವಶರಣ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಕಾರ್ಯಕ್ರಮ

Advertisement

ಸಿರುಗುಪ್ಪ : ನಗರದ ಸಿ.ಡಿ.ಪಿ.ಓ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ, ತಾಲೂಕಾಡಳಿತ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಿತು.
 
 ಸಭೆಯನ್ನುದ್ದೇಶಿಸಿ ಮಾತನಾಡಿದ ಶಿರಸ್ಥೆದಾರ ಸಿದ್ದಾರ್ಥ್ ಕಾರಂಜಿ ಅವರು 12ನೇ ಶತಮಾನದಲ್ಲಿನ ಅಸಮಾನತೆ, ಜಾತಿ, ಮತಬೇದ ಹೋಗಲಾಡಿಸಿ ಸಮ ಸಮಾಜದ ನಿರ್ಮಾಣಕ್ಕೆ ಮುಂದಾದ ಬಸವಣ್ಣರು ಆರಂಭಿಸಿದ ಅನುಭವ ಮಂಟಪದ ಶರಣರಲ್ಲಿ ಹಡಪದ ಅಪ್ಪಣ್ಣ ಅವರ ಪಾತ್ರವು ಬಹು ಮುಖ್ಯವಾಗಿತ್ತು. ಇಂದು ನಾವೆಲ್ಲಾ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಹೋಗಬೇಕಿದೆಂದು ತಿಳಿಸಿದರು.
 
 ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಅವರು ಮಾತನಾಡಿ ಹಿಂದುಳಿದ ಅಬಿವೃದ್ದಿ ನಿಗಮದಲ್ಲಿ ಹಲವಾರು ಯೋಜನೆಗಳಿವೆ. ವಿದ್ಯಾರ್ಥಿಗಳು ಮತ್ತು ಸಮಾಜದವರು ಅವುಗಳ ಪ್ರಯೋಜನಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
 
 ತಾಲೂಕು ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷ ಹೆಚ್.ಪಿ. ವೀರಣ್ಣ ಅವರು ಸಮಾಜಕ್ಕೆ ಪ್ರತ್ಯೇಕ ಸಮುದಾಯ ಭವನ, ನಿವೇಶನಗಳು, ಕಾರ್ಮಿಕ ಗುರುತಿನ ಚೀಟಿ, ಸೇರಿದಂತೆ ಇನ್ನಿತರ ಶೈಕ್ಷಣಿಕ ಸೌಲಭ್ಯಗಳಿಗೆ ಮನವಿ ಮಾಡಿದರು.
 
ಇದೇ ವೇಳೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಮ್.ಸಿದ್ದಯ್ಯ, ಕಾರ್ಮಿಕ ಇಲಾಖೆಯ ನಿರೀಕ್ಷಕ ತಿರುಮಲೇಶ್ ಹಡಪದ ಅಪ್ಪಣ್ಣ ಸಮಾಜದ ಗೌರವಾಧ್ಯಕ್ಷ ಹೆಚ್.ಕೆ. ನಾಗರಾಜ ಉಪಾಧ್ಯಕ್ಷ ಬಸಪ್ಪ, ಹಾಗೂ ಸಮಾಜದವರು ಹಾಗೂ ಇನ್ನಿತರ ಇಲಾಖೆಗಳ ಸಿಬ್ಬಂದಿಗಳು ಇದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ