LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪನೆಗೆ ಅರ್ಜಿ ಆಹ್ವಾನ : ಶ್ರೀನಾಥ್ ಬಾಬು

Advertisement

ತುರುವೇಕೆರೆ : ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆದೇಶದಂತೆ ಹಾಗೂ ಸಂಪುಟ ಸಭೆಯ ನಿರ್ಣಯದಂತೆ ತುರುವೇಕೆರೆ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಮತ್ತು ನೋಂದಾಯಿಸಲು ಆಸಕ್ತ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಶ್ರೀನಾಥ್ ಬಾಬು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಯುವ ಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರಾಸರಿ ನಾಲ್ಕು ಸಾವಿರ ಜನಸಂಖ್ಯೆಗೆ ಒಂದರಂತೆ ಯುವ ಸಂಘಗಳನ್ನು ಸ್ಥಾಪಿಸಲು ಆದೇಶಿಸಲಾಗಿದ್ದು, ತುರುವೇಕೆರೆಯಲ್ಲಿ ಈ ಪ್ರಕ್ರಿಯೆ ಆರಂಭಿಸಲಾಗಿದೆ.  

16 ವರ್ಷದಿಂದ 35 ವರ್ಷದೊಳಗಿನ ವಯೋಮಿತಿಯ ಸ್ಥಳೀಯ ನಿವಾಸಿಗಳು ಈ ಸಂಘದ ಸದಸ್ಯರಾಗಲು ಅರ್ಹರಿರುತ್ತಾರೆ. ಪ್ರತಿ ಘಟಕದಲ್ಲಿ ಕನಿಷ್ಠ 100 ಸದಸ್ಯರಿರಬೇಕಿದ್ದು, ಬಿಜಿವೈಎಸ್ ಪೋರ್ಟಲ್ ಅಥವಾ ಮೊಬೈಲ್ ಆಪ್ ಮೂಲಕ ಅಥವಾ ಸ್ಥಳೀಯ ಕರ್ನಾಟಕ ಒನ್ ಹಾಗೂ ನಾಗರೀಕ ಸೇವಾ ಕೇಂದ್ರ (ಗ್ರಾಮ ಒನ್) ಗಳ ಸಹಾಯದಿಂದ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ನೋಂದಣೀಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಪ್ರತಿ ಸದಸ್ಯರಿಗೆ ತಲಾ 10ರೂ ನೋಂದಣಿ ಶುಲ್ಕ ನಿಗದಿಯಾಗಿದೆ. ಸಂಘಗಳನ್ನು ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಅಡಿಯಲ್ಲಿ ನೋಂದಾಯಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಗಿರೀಶ್ ಕೆ ಭಟ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ