LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎಸ್ಸಿ ವಿದ್ಯಾರ್ಥಿಗಳಿಗೆ ದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Advertisement

2026ನೇ ಸಾಲಿನ ಮಾರ್ಚ್, ಎಪ್ರಿಲ್ ನಲ್ಲಿ ನಡೆದ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಅಂತಿಮ ವರ್ಷದ ಪಿ.ಯು.ಸಿ, 12ನೇ, ಐಟಿಐ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು.

ಹಾಗೂ ಮೆಟ್ರಿಕ ನಂತರದ ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ಕೋರ್ಸುಗಳಿಗೆ ಸೆಮಿಸ್ಟರ್ ಪದ್ದತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರಗಳಲ್ಲಿ ಪ್ರಥಮ ಪ್ರಯತ್ನದಲ್ಲಿಯೇ ಪಾಸಾಗಿರಬೇಕು.

ಯಾವುದೇ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‍ಗಳಲ್ಲಿcompartmental/carry over system ರಡಿ ಪಾಸಾಗಿದ್ದರೆ ಅಂತಹವರು ಬಹುಮಾನದ ಹಣ ಪಡೆಯಲು ಅರ್ಹರಿರುವುದಿಲ್ಲ.

ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸಬೇಕು. ಹಾಗೂ ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲಾತಿಗಳನ್ನು ದೃಢೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ. ಕಂಪೌಂಡ, ಧಾರವಾಡ ಇಲ್ಲಿಗೆ ಸಲ್ಲಿಸಬೇಕು. 

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಹಾಗೂ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಯ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳ ಗ್ರೇಡ್-1, 2ರವರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ