LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕುರಿ/ಮೇಕೆ ಘಟಕ ಸ್ಥಾಪಿಸಲು  ಆಸಕ್ತರಿಂದ ಅರ್ಜಿ ಆಹ್ವಾನ

Advertisement

ಬೆಂಗಳೂರು : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಘಟಕ ಸ್ಥಾಪಿಸಲು ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.


ಅರ್ಜಿದಾರರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿರುವ 18 ರಿಂದ 60 ವರ್ಷದೊಳಗಿನವರಾಗಿದ್ದು, ಜಾತಿ ಪ್ರಮಾಣ ಹೊಂದಿರಬೇಕು ಮತ್ತು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊAಡಿರಬೇಕು.ಮಹಿಳೆಯರಿಗೆ ಶೇ. 33.3 ರಷ್ಟು ಮತ್ತು ವಿಶೇಷಚೇತನರಿಗೆ ಶೆ. 3 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲೆಯ ಎಲ್ಲಾ ತಾಲೂಕು ಪಶು ಆಸ್ಪತ್ರೆ ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಮಾ. 10 ರೊಳಗಾಗಿ ಜಿಲ್ಲಾ ಅನುಷ್ಠಾನಾಧಿಕಾರಗಳ ಕಚೇರಿಗೆ ಸಲ್ಲಿಸುವಂತೆ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿ/ ಪಶುವೈದ್ಯ ಸೇವಾ ಸಂಸ್ಥೆಗಳ ಕಚೇರಿಯನ್ನು ಸಂಪರ್ಕಿಸುವುದು.ಕ್ರೈಸ್-2026: ಆರ್ ಡಿ ಸಂಖ್ಯೆ ನಮೂದಿಸಲು ಮಾರ್ಚ್ 30ರವರೆಗೆ ಅವಕಾಶ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST