LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ತಾವೇ ಇನ್ಸೂರೆನ್ಸ್ ಮಾಡಿ ವ್ಯಕ್ತಿಯನ್ನ ಹತ್ಯೆಗೈದ ದುಷ್ಟರು ಅರೆಸ್ಟ್ 

Advertisement
ಹಾವೇರಿ: ಆಕ್ಸಿಡೆಂಟಲ್ ಇನ್ಸೂರೆನ್ಸ್ ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿ, ಅಪಘಾತದ ನಾಟಕವಾಡಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಸೆಪ್ಟೆಂಬರ್.27, 2025ರಂದು ರಟ್ಟಿಹಳ್ಳಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ 38 ವರ್ಷದ ಬಸವರಾಜ್ ಪುಟ್ಟಪ್ಪನವರ್ ಕೊಲೆ ಮಾಡಲಾಗಿತ್ತು.

ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಂತ ಪೊಲೀಸರಿಗೆ ವಿಮೆ ಹಣಕ್ಕಾಗಿ ಹತ್ಯೆ ಮಾಡಿರುವುದು ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಬಸವರಾಜ್ ಮಾವ ರಾಘವೇಂದ್ರ ಮಾಳಗೊಂಡರ, ಸಿದ್ದನಗೌಡ ಹಲಗೇರಿ, ಪ್ರವೀಣ್ ಹಾಗೂ ಲೋಕೇಶ್ ಎಂಬ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಅಂದಹಾಗೇ ಹತ್ಯೆಯಾಗಿದ್ದ ಬಸವರಾಜ್ ತಂದೆ-ತಾಯಿ, ಸಹೋದರ ನಿಧನರಾಗಿದ್ದರು. ಹೀಗಾಗಿ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದನು. ಈತನಿಗೆ 8 ಎಕರೆ ಜಮೀನು, ಮನೆ ಇತ್ತು.

ಅಲ್ಲದೇ ಆರೋಪಿಗಳೇ ಮೃತನಿಗೆ ಆಕ್ಸಿಡೆಂಟಲ್ ಇನ್ಸೂರೆನ್ಸ್ ಮಾಡಿಸಿದ್ದರು. ಈ ವಿಮೆ ಕ್ಲೈ ಮಾಡಲು ಬಸವರಾಜ್ ಹತ್ಯೆ ಮಾಡಿ ಅಪಘಾತದ ನಾಟಕವಾಡಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST