LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮುಖ್ಯಮಂತ್ರಿ ಪ್ರಧಾನ ಸಲಹೆಗಾರರನ್ನಾಗಿ ಜಿ.ಸಿ. ಚಂದ್ರಶೇಖರ್ ನೇಮಕ 

Advertisement

ಬೆಂಗಳೂರು: ರಾಜ್ಯಸಭಾ ಸದಸ್ಯರಾದ ಜಿ.ಸಿ. ಚಂದ್ರಶೇಖರ್ ಅವರನ್ನು ಮುಖ್ಯಮಂತ್ರಿಯವ ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (ರಾಜ್ಯ ಶಿಷ್ಟಾಚಾರ) 2026ರ ಜುಲೈ 13ರಂದು ಈ ಕುರಿತು ಜ್ಞಾಪನ ಪತ್ರವನ್ನು ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ನೇಮಕಾತಿ ಮಾಡಲಾಗಿದೆ.

ಈ ಹುದ್ದೆಯು ಸಂಪೂರ್ಣವಾಗಿ ಗೌರವಾಧಾರಿತವಾಗಿದ್ದು, ಯಾವುದೇ ರೀತಿಯ ಸಂಭಾವನೆ, ಭತ್ಯೆ, ಗೌರವಧನ ಅಥವಾ ಇತರ ಯಾವುದೇ ಸರ್ಕಾರಿ ಸೌಲಭ್ಯಗಳಿಗೆ ಅವರು ಅರ್ಹರಾಗಿರುವುದಿಲ್ಲ.ಮಾನ್ಯ ಮುಖ್ಯಮಂತ್ರಿಯವರಿಗೆ ರಾಜಕೀಯ ವ್ಯವಹಾರಗಳು ಹಾಗೂ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಅಗತ್ಯ ನೆರವು ಮತ್ತು ಸಲಹೆಗಳನ್ನು ನೀಡುವ ಜವಾಬ್ದಾರಿಯನ್ನು ಇವರಿಗೆ ವಹಿಸಲಾಗಿದೆ.

ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಜಿ.ಸಿ. ಚಂದ್ರಶೇಖರ್ ಅವರು ಮುಖ್ಯಮಂತ್ರಿಯವರ ಪ್ರಧಾನ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST