LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಲೋಕಾಯುಕ್ತ ಬಲೆಗೆ ಬಿದ್ದ ಎಎಸ್‌ಐ ಮತ್ತು ಪಿಎಸ್‌ಐ 

Advertisement
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ 70 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಎಎಸ್‌ಐ ಮತ್ತು ಪಿಎಸ್‌ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬಿ ರಿಪೋರ್ಟ್ ಹಾಕಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪಿಎಸ್‌ಐ ಶರಣಪ್ಪ ಮತ್ತು ಎಎಸ್‌ಐ ವೆಂಕಟೇಶಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇವರು ಜಮೀನು ವಿವಾದ ಸಂಬಂಧ ಗಲಾಟೆ ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಹಾಕಲು 1 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು.

ಇಂದು ಕನ್ನಡ ಭವನದ ಸಮೀಪ ಲಂಚ ಪಡೆಯುತ್ತಿದ್ದ ವೆಂಕಟೇಶಪ್ಪ ಮತ್ತು ಚಿಕ್ಕಬಳ್ಳಾಪುರ ವರವಲಯದ ಚಿತ್ರಾವತಿಯ ಸಮೀಪ ಶರಣಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೊಳಪಡಿಸಿ ಆರೋಪಿಗಳನ್ನು ತಪಾಸಣೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪಿಎಸ್‌ಐ ಶರಣಪ್ಪ ಸೂಚನೆ ಮೇರೆಗೆ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ. 70 ಸಾವಿರ ರೂ. ಲಂಚ ಪಡೆಯುತ್ತಿದ್ದ ವೆಂಕಟೇಶಪ್ಪ ಬಲೆಗೆ ಬಿದ್ದಿದ್ದಾರೆ.

ಮೊಟ್ಲೂರಿನ ರಘು ಅವರಿಂದ ಲಂಚ ಪಡೆಯುವಾಗ ಎಎಸ್‌ಐ ವೆಂಕಟೇಶಪ್ಪ ಬಲೆಗೆ ಬಿದ್ದಿದ್ದಾರೆ. ನಂತರ ಪಿಎಸ್‌ಐ ಶರಣಪ್ಪ ಅವರನ್ನು ಬಂಧಿಸಲಾಗಿದೆ.

ಪಿಎಸ್‌ಐ ಮತ್ತು ಎಎಸ್‌ಐ ಅವರನ್ನು ಪ್ರತ್ಯೇಕ ವಿಚಾರಣೆಗೊಳಪಡಿಸಲಾಗಿದೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ