LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪತ್ನಿಯ ಕೊಲೆಗೆ ಯತ್ನಿಸಿ, ವರದಕ್ಷಿಣೆಗಾಗಿ ಕಿರುಕುಳ : ಪಿಎಸ್‌ಐ ಅರೆಸ್ಟ್ 

Advertisement

ಬೆಂಗಳೂರು: ಸಾರ್ವಜನಿಕರ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸಬೇಕಾದ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಅವರೇ ಪತ್ನಿಯ ಕೊಲೆಗೆ ಯತ್ನಿಸಿ, ವರದಕ್ಷಿಣೆಗಾಗಿ ಕಿರುಕುಳ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ. 

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಭೈರಪ್ಪ ಅವರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಕಾಪಾಡಬೇಕಿದ್ದ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಅವರೇ ಪತ್ನಿಯ ಕೊಲೆಗೆ ಯತ್ನಿಸಿ, ವರದಕ್ಷಿಣೆಗಾಗಿ ಕಿರುಕುಳ ನೀಡಿದ ಗಂಭೀರ ಆರೋಪದಡಿ ಬಂಧನಕ್ಕೊಳಗಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. 

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಭೈರಪ್ಪ ಅವರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದು, ಕೊಲೆ ಯತ್ನ, ವರದಕ್ಷಿಣೆ ಕಿರುಕುಳ ಹಾಗೂ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಭೈರಪ್ಪ ಅವರು ಕಳೆದ ಕೆಲವು ತಿಂಗಳುಗಳಿಂದ ಪತ್ನಿಗೆ ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. 

ಇತ್ತೀಚೆಗೆ ಕೌಟುಂಬಿಕ ಕಲಹ ತೀವ್ರಗೊಂಡ ವೇಳೆ ಮನೆಯಲ್ಲಿದ್ದ ಮಚ್ಚು ಹಿಡಿದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆಯ ಬಳಿಕ ಸಂತ್ರಸ್ತೆ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರಂಭದಲ್ಲಿ ಎನ್‌ಸಿಆರ್‌ ದಾಖಲಿಸಲಾಗಿತ್ತು. ಬಳಿಕ ಪ್ರಾಥಮಿಕ ತನಿಖೆಯಲ್ಲಿ ಗಂಭೀರ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಿಸಿ ಭೈರಪ್ಪ ಅವರನ್ನು ಬಂಧಿಸಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST