LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ : ಬಿ. ವೈ ವಿಜಯೇಂದ್ರ 

Advertisement
ಶಿವಮೊಗ್ಗ: ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಹಾಗೂ ವಿಜಯೇಂದ್ರ ಅವರನ್ನು ಡಿಸಿಎಂ ಮಾಡಲು ದೆಹಲಿಗೆ ಅಮಿತ್ ಶಾ ಭೇಟಿಗೆ ಬಿಜೆಪಿ ನಿಯೋಗ ಹೋಗಲಿದೆ ಎಂಬ ಶಸಾಕ ಯತ್ನಾಳ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ವೈ.ವಿಜಯೇಂದ್ರ, ಡಿಕೆಶಿ ಅವರನ್ನು ಬಿಜೆಪಿಗೆ ಸೇರಿಸಲು ಅಮಿತ್ ಶಾ ಭೇಟಿ ಮಾಡಿಸಿದ್ದ ಎಂಬ ಯತ್ನಾಳ್ ಸರಿಯಲ್ಲ. ಹೊಂದಾಣಿಕೆ ರಾಜಕಾರಣ ಎಂದು ಆರೋಪ ಮಾಡುತ್ತಿರುವ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಗುಡುಗಿದ್ದಾರೆ.

ಯತ್ನಾಳ್ ವಿರುದ್ಧ 1 ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಬೇಕೋ ಅಥವಾ 1 ಕೋಟಿ ಮಾನನಷ್ಟ ಮೊಕದ್ದಮೆ ಹೂಡಬೇಕೋ ಎಂಬ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಬೇಕು ಎಂದುಕೊಂಡಿದ್ದೇನೆ. ಆದರೆ ಯತ್ನಾಳ್ ನನಗೆ ಡಿಸಿಎಂ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಅಧಿಕಾರಕ್ಕಾಗಿ ಸಿಎಂ ಹಾಗೂ ಡಿಸಿಎಂ ನಡುವೆ ಕಿತ್ತಾಟ ನಡೆಯುತ್ತಿದೆ. ಅಧಿವೇಶನದಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚೆಗೆ ಅವಕಾಶ ಕೊಡುತ್ತಿಲ್ಲ. ರಾಜ್ಯದ ಜನರಿಗೆ ಕೃಷಿ ಸಚಿವರು ಯಾರೆಂಬುದೇ ಗೊತ್ತಿಲ್ಲದ ಸ್ಥಿತಿಯಿದೆ.

ಕಾಟಾಚಾರಕ್ಕಾಗಿ ಅಧಿವೇಶನ ನಡೆಯುತ್ತಿದೆ. ಬೆಳಗಾವಿ ಅಧಿವೇಶನ ಯಾವ ಪುರುಷಾರ್ಥಕ್ಕೆ ಎಂದು ನಾನು ಈ ಹಿಂದೆ ಕೇಳಿದ್ದೆ. ಕುರ್ಚಿ ಕಿತ್ತಾಟ ಕುಗಿದ ಬಳಿಕ ಅಧಿವೇಶನ ನಡೆಸುವಂತೆಯೂ ಸಲಹೆ ನೀಡಿದ್ದೆ ಎಂದಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ