LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಾಗಲಕೋಟೆ: ಜಿಲ್ಲಾ ಆಸ್ಪತ್ರೆಯಲ್ಲಿ ಹಿಂದೂ ಯುವತಿ ಮೇಲೆ ದೌರ್ಜನ್ಯ - ಆಕ್ರೋಶ

Advertisement

ಕಲಾದಗಿ : ಬಾಗಲಕೋಟೆ ನಗರದ ನವನಗರದಲ್ಲಿರುವ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಹಿಂದೂ ಯುವತಿಯೊಬ್ಬಳನ್ನು ಕೊಠಡಿಯಲ್ಲಿ ಕೂಡಿ ಹಾಕಿ ದೌರ್ಜನ್ಯ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹಿಂದೂ ಮುಖಂಡ ಕುಮಾರಸ್ವಾಮಿ ಹಿರೇಮಠ ತಿಳಿಸಿದರು. ತಡ  ರಾತ್ರಿ ಸುಮಾರು 12 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಯುವತಿಯನ್ನು ಆಸ್ಪತ್ರೆಯ ಶೌಚಾಲಯದ ಕೊಠಡಿಯೊಂದರಲ್ಲಿ ಕೂಡಿ ಹಾಕಿ ಹಿಂಸೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕೃತ್ಯದಲ್ಲಿ ಫರೀದ ಸಾಬ ಡಾಂಗಿ  ಎಂಬ ಯುವಕ ಭಾಗಿಯಾಗಿದ್ದಾನೆ ಎಂದು ದೂರಲಾಗಿದೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ಸುರಕ್ಷತೆಯ ಕೊರತೆ: ಸಾರ್ವಜನಿಕರು ನಂಬಿಕೆಯಿಂದ ಬರುವ ಸರ್ಕಾರಿ ಆಸ್ಪತ್ರೆಯಲ್ಲಿ ಇಂತಹ ಘಟನೆ ನಡೆದಿರುವುದು ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ. ಆರೋಪಿ ದಂಗಿ ನದಾಫ ಈ ಹಿಂದೆಯೂ ಸಹ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿ ಅಮಾನತುಗೊಂಡಿದ್ದ ಎನ್ನಲಾಗಿದೆ. ಮಹಿಳಾ ಆಯೋಗಕ್ಕೆ ಒತ್ತಾಯ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ವಿಜಯಲಕ್ಷ್ಮಿ ಅವರು ತಕ್ಷಣ ಬಾಗಲಕೋಟೆಗೆ ಭೇಟಿ ನೀಡಿ, ನೊಂದ ಯುವತಿಗೆ ನ್ಯಾಯ ಒದಗಿಸಬೇಕು ಹಾಗೂ ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಕಠಿಣ ಶಿಕ್ಷೆಗೆ ಆಗ್ರಹ: ಇಂತಹ ಘಟನೆಗಳು ಮರುಕಳಿಸದಂತೆ ಉತ್ತರ ಪ್ರದೇಶದ ಮಾದರಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಸಾರ್ವಜನಿಕವಾಗಿ ಶಿಕ್ಷೆ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸದ್ಯ ಪೊಲೀಸ್ ಇಲಾಖೆಯು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆಯನ್ನು ಚುರುಕುಗೊಳಿಸಿದೆ.   ವರದಿ : ಬಸವರಾಜ ಪೂಜಾರಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ