LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಮೈಸೂರು ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

Advertisement
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೊತ್ಸವಕ್ಕೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಚಾಲನೆ ನೀಡಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡ ಅದಿದೇವತೆ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವ ಉದ್ಘಾಟಿಸಿದರು.

ದಸರಾ ಉದ್ಘಾಟನೆ ಬಳಿಕ ಮಾತನಾಡಿದ ಲೇಖಕಿ ಬಾನು ಮುಷ್ತಾಕ್, ಚಾಮುಂಡಿ ತಾಯಿ ಕೃಪಾಶಿರ್ವಾದದಿಂದ ನಾನು ದಸರಾ ಉದ್ಘಾಟಿಸಿದ್ದೇನೆ.

ಬೂಕರ್ ಪ್ರಶಸ್ತಿ ಬಂದರೆ ನನ್ನನ್ನು ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಬರುವುದಾಗಿ ನನ್ನ ಆಪ್ತ ಸ್ನೇಹಿತೆಯೊಬ್ಬಳು ಹರಕೆ ಹೊತ್ತಿದ್ದಳು.

ಆದರೆ ಪ್ರಶಸ್ತಿ ಬಂದ ಬಳಿಕ ನನಗೆ ಬರಲು ಸಾಧ್ಯವಾಗಿರಲಿಲ್ಲ. ಈಗ ಕರ್ನಾಟಕ ಸರ್ಕಾರದ ಮೂಲಕವಾಗಿ ತಾಯಿ ಚಾಮುಂಡಿ ದೇವೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ. ಇದು ನನ್ನ ಜೀವನದ ಗೌರವದ ಘಳಿಗೆ ಎಂದು ಹೇಳಿದರು.

ತಾಯಿ ಚಾಮುಂಡಿ ಶಕ್ತಿಯ, ಧೈರ್ಯದ, ಮಮತೆಯ ಸಂಕೇತ. ನಮ್ಮೊಳಗಿನ ದ್ವೇಷ, ಅಸಹಿಷ್ಣತೆಯನ್ನು ನಾಶ ಮಾಡಲಿ. ದಸರಾ ಶಾಂತಿಯ ಹಬ್ಬ, ಇದು ಸರ್ವ ಜನಾಂಗದ ಶಾಂತಿಯ ತೋಟ. ಈ ನೆಲದ ಸುಗಂಧದ ಐಕ್ಯತೆ ಆಗಲಿ ಎಂದರು. ದಸರಾ ಕೇವಲ ಅಮೈಸೂರು, ನಾಡು, ದೇಶಕ್ಕೆ ಮಾತ್ರ ಸೀಮಿತವಾಗದೇ ಇಡೀ ಪ್ರಪಂಚದಾದ್ಯಂತ ನೆಲೆ ಕಂಡುಕೊಳ್ಳಲಿ ಎಂದರು.

ನಾವೆಲ್ಲರೂ ಒಂದೇ ಗಗನಡಿಯ ಪಯಣಿಗರು. ಆಕಾಶ ಯಾರನ್ನೂ ಬೇರ್ಪಡಿಸುವುದಿಲ್ಲ. ಭೂಮಿ ಯಾರನ್ನೂ ದೂರ ತಳ್ಳುವುದಿಲ್ಲ. ಮನುಷ್ಯ ಮಾತ್ರ ಗಡಿಗಳನ್ನು ಹಾಕಿಕೊಳ್ಳುತ್ತಾನೆ. ನಾವೇ ಈ ಗಡಿಗಳನ್ನು ಅಳಿಸಿ ಹಾಕಿಕೊಳ್ಳಬೇಕು ಎಂದು ತಿಳಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ