Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವ ತತ್ವಗಳು ಸಮಾಜಕ್ಕೆ ದಾರಿದೀಪ: ಬೆಳಗಾವಿಯಲ್ಲಿ 'ಬಸವಾದಿ ಶರಣರ ವಿಚಾರ ಸಂಕಿರಣ' ಯಶಸ್ವಿ

Advertisement

​ಬೆಳಗಾವಿ: ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಭಾನುವಾರ, ಮೇ 31, 2026 ರಂದು ಬಸವ ಧರ್ಮ ವೇದಿಕೆ (ಡಾ. ಜಿ. ಪರಮೇಶ್ವರ ಬ್ರಿಗೇಡ್ ಕರ್ನಾಟಕ) ಆಶ್ರಯದಲ್ಲಿ ಬಸವ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ "ಬಸವಾದಿ ಶರಣರ ವಿಚಾರ ಸಂಕಿರಣ" ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು.
​ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದ ಭಲವಾಡಿ ಗುರುಪೀಠ ಚಿತ್ರದುರ್ಗದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಬಸವನಾಗ ಮಹಾಸ್ವಾಮಿಗಳು ಜ್ಯೋತಿ ಬೆಳಗಿಸಿ, ಬಸವೇಶ್ವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

news_1780319559_1_775.webp

 


​ಪೂಜ್ಯ ಶ್ರೀಗಳ ಆಶೀರ್ವಚನ: ​ನಂತರ ಶರಣರ ವಿಚಾರಗಳನ್ನು ಪ್ರಸ್ತಾಪಿಸಿ ಮಾತನಾಡಿದ ಪೂಜ್ಯ ಮಹಾಸ್ವಾಮಿಗಳು, "ರಾಷ್ಟ್ರ ಮಟ್ಟದಲ್ಲಿ ಮತ್ತು ಅಂತರರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಅಪ್ಪಾಜಿಯವರು ಹಾಗೂ ಜಾನಪದ ಹಾಡುಗಾರರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಇಂತಹ ಮಹನೀಯರ ವಿಚಾರಧಾರೆಗಳನ್ನು ನೆನೆಯುವುದು ಮತ್ತು ಆ ಮೂಲಕ ಶರಣರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ನಾವೆಲ್ಲರೂ ಈ ಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನಮ್ಮ ಪುಣ್ಯವೇ ಸರಿ" ಎಂದು ಮಾರ್ಮಿಕವಾಗಿ ನುಡಿದರು.
​ಮುಖ್ಯ ಅತಿಥಿಗಳು ಮತ್ತು ಗಣ್ಯರ ಉಪಸ್ಥಿತಿ: ​ಕಾರ್ಯಕ್ರಮದಲ್ಲಿ ವಿಶೇಷ ಸನ್ಯಾನಿತರಾಗಿ ಬೆಂಗಳೂರಿನ 'ಕ್ರೈಂ ಪ್ರಪಂಚ' ಪಾಕ್ಷಿಕ ಪತ್ರಿಕೆಯ ಸಂಪಾದಕರಾದ ಶ್ರೀ ವಿ. ಬಸವರಾಜು ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ:
​ಶ್ರೀ ಮೃತ್ಯುಂಜಯ ಬಡಿಗೇರ (ಸಮಾಜ ಸೇವಕರು, ಬೆಳಗಾವಿ)
​ಶ್ರೀ ಮಹಾಬಲೇಶ್ವರ ಸಾಬಣ್ಣವರ (ತಬಲ ವಾದಕರು, ಬೆಳಗಾವಿ)
​ಶ್ರೀ ದುರಗೇಶ ಮೇತ್ರಿ (ಬೆಳಗಾವಿ ಜಿಲ್ಲಾ ಭಲವಾಡಿ ಸಮಾಜದ ನಾಯಕರು)
​ಶ್ರೀ ಲಕ್ಷ್ಮಣ ಇಂಗಳಿ ಗೋಕಾಕ್ (ಡಾ. ಜಿ. ಪರಮೇಶ್ವರ ಬ್ರಿಗೇಡ್ ಸದಸ್ಯರು) ಭಾಗವಹಿಸಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿದರು.
​ಕಾರ್ಯಕ್ರಮವನ್ನು ಬೆಳಗಾವಿಯ ರಾಜಕೀಯ ವಿಶ್ಲೇಷಕರಾದ ಹಾಗೂ ಕರ್ನಾಟಕ ದಲಿತ ಸಮಾಜದ ಮುಖಂಡರಾದ ಭಗವಾನ್ ಐಹೊಳಿ ಅವರು ಅತ್ಯಂತ ಅಚ್ಚುಕಟ್ಟಾಗಿ ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಸಮಾಜದ ಗಣ್ಯರು ಹಾಗೂ ಬಸವಾನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.        

ವರದಿ : ಸದಾಶಿವಮಹಾಂತೇಶ್ ಎಸ್ ಹುಲಿಕಟ್ಟಿ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು