LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪನೆ ಮಾಡಿಲ್ಲ :ಶಾಸಕ ಯತ್ನಾಳ್ 

Advertisement
ಬೆಳಗಾವಿ : ಬಸವಣ್ಣನವರು ಲಿಂಗಾಯತ ಧರ್ಮವನ್ನು ಮಾಡಿಲ್ಲ, ಕೆಲವು ಕಂಪನಿಗಳು ಅದನ್ನು ತಯಾರು ಮಾಡಿಕೊಂಡಿವೆ.

ಬಸವಣ್ಣನವರು ಹಿಂದೂ ಸಮಾಜದಲ್ಲಿ ಮೌಢ್ಯಗಳ ವಿರುದ್ಧ ಹೋರಾಡಿದ್ದಾರೆಯೇ ಹೊರತು ಲಿಂಗಾಯತ ಧರ್ಮವನ್ನು ಸ್ಥಾಪನೆಯೇ ಮಾಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.

ರಾಯಭಾಗ ತಾಲೂಕಿನ ಹಾರುಗೇರಿಯಲ್ಲಿ ಪಂಚಮಸಾಲಿ ಮೀಸಲಾತಿ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವು ಮಠಾಧೀಶರು ವೀರಶೈವ ಲಿಂಗಾಯತ ಎಂದು ಜಾತಿಗಣತಿಯಲ್ಲಿ ಉಲ್ಲೇಖಿಸುವಂತೆ ಹೇಳುತ್ತಿದ್ದಾರೆ.

ಆದರೆ ಎಲ್ಲಿಯವರೆಗೆ ಕೇಂದ್ರ ಸರ್ಕಾರ ವೀರಶೈವ ಲಿಂಗಾಯತ ಎಂದು ಅಧಿಕೃತವಾಗಿ ಘೋಷಣೆ ಮಾಡುವುದಿಲ್ಲವೋ ಅಲ್ಲಿಯವರೆಗೆ ಈ ರೀತಿ ನಾವು ಬರೆಸಿದರೆ ಯಾವುದೇ ಅರ್ಥವಿಲ್ಲ. ಕೆಲವು ಮೂರ್ಖರು ಲಿಂಗಾಯತ ಸಮುದಾಯವನ್ನು ತಪ್ಪು ದಾರಿಗೆ ಎಳೆಯುವುದಕ್ಕೆ ಪ್ರಯತ್ನ ಪಡುತ್ತಿದ್ದಾರೆ ಎಂದು ಯತ್ನಾಳ್​ ಹರಿಹಾಯ್ದರು.

ಧರ್ಮ ಎಂದಲ್ಲಿ ಹಿಂದೂ ಎಂದೇ ಬರೆಸಬೇಕು, ಜಾತಿ ಕಾಲಂನಲ್ಲಿ ಲಿಂಗಾಯತ, ಪಂಚಮಸಾಲಿ ಏನಿದೆಯೋ ಅದನ್ನು ಬರೆಸಬೇಕು, ಸರ್ಕಾರದ ಮೀಸಲಾತಿಯಲ್ಲಿ ವೀರಶೈವ ಲಿಂಗಾಯತ ಎಂಬುದೇ ಇಲ್ಲ, ಆರು ಧರ್ಮಕ್ಕೆ ಮಾತ್ರ ನಮ್ಮ ಸಂವಿಧಾನದಲ್ಲಿ ಅವಕಾಶ ಇದೆ. ಧರ್ಮ ಎಂದು ಘೋಷಿಸದಿರುವುದನ್ನು ಸೇರಿಸಿ ಭವಿಷ್ಯದ ನಮ್ಮ ಮಕ್ಕಳನ್ನು ಕೊಲೆ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ