LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ರಾಜ್ಯ ರಾಜಕಾರಣಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ನಿವೃತ್ತಿ ಘೋಷಣೆ

Advertisement

ಬೆಂಗಳೂರು: ಕರ್ನಾಟಕ ರಾಜಕೀಯದ ಹಿರಿಯ ಮುತ್ಸದ್ದಿ ಹಾಗೂ 'ಹಳ್ಳಿಹಕ್ಕಿ' ಎಂದೇ ಖ್ಯಾತರಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ದೀರ್ಘಕಾಲದ ರಾಜಕೀಯ ಪಯಣದ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. 

.ಮುಂಬರುವ ಯಾವುದೇ ರೀತಿಯ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ವಿಶ್ವನಾಥ್, ಈ ಮೂಲಕ ಸಕ್ರಿಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದಾರೆ.

ರಾಜ್ಯ ರಾಜಕಾರಣದ ವಿವಿಧ ಹಂತಗಳಲ್ಲಿ ಪ್ರಭಾವಶಾಲಿ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ಈಗ ಚುನಾವಣಾ ಪಯಣಕ್ಕೆ ತೆರೆ ಎಳೆದಿದ್ದಾರೆ.

ನಿವೃತ್ತಿ ಘೋಷಣೆಯ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದರು. ಪೋಕ್ಸೋ ಪ್ರಕರಣ ಮತ್ತು ಈ ಸಮಯದಲ್ಲಿ ನಡೆಯುತ್ತಿರುವ ಸನ್ಮಾನಗಳು ರಾಜ್ಯದ ಘನತೆಗೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಸರ್ಕಾರದ ನಡೆಯನ್ನು ಟೀಕಿಸಿದ ಅವರು, "ಸ್ವತಃ ವಕೀಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆಲ್ಲಾ ತಿಳಿಯುತ್ತಿಲ್ಲವೇ?" ಎಂದು ಕಿಡಿ ಕಾರಿದರು.

ಬಿಎಸ್‌ವೈ ಅವರ 'ಅಭಿಮಾನೋತ್ಸವ' ಆಚರಣೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, "ಪೋಕ್ಸೋ (POCSO) ನಂತಹ ಗಂಭೀರ ಪ್ರಕರಣದ ಆರೋಪ ಎದುರಿಸುತ್ತಿರುವ ಸಂದರ್ಭದಲ್ಲಿ ಅಭಿಮಾನೋತ್ಸವ ಮಾಡುವುದು ಎಷ್ಟು ಸರಿ?" ಎಂದು ಪ್ರಶ್ನಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ