LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಗೋಡ್ಸೆ ಸಿದ್ದಾಂತ ತರುವ ಪ್ಲಾನ್ ಬಿಜೆಪಿ ಮಾಡಿದೆ : ಪ್ರಮೋದ್ ತಿವಾರಿ

Advertisement
ನವದೆಹಲಿ : ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ವಿರುದ್ಧ ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ತೀವ್ರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಅವರ ಸಂವಿಧಾನ ಮತ್ತು ಜನರ ಹಕ್ಕುಗಳಿಗಾಗಿ ಹೋರಾಡುವುದನ್ನು ಮುಂದುವರಿಸುತ್ತದೆ ಎಂದರು.

ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಭಾರತದ ಸಂವಿಧಾನವನ್ನು ಬದಲಾಯಿಸುವ ಗುಪ್ತ ಕಾರ್ಯಸೂಚಿಯನ್ನು ಹೊಂದಿದ್ದಾರೆ. 2024 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಜನರು ಈ ಯೋಜನೆಯನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದರು.

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದಲ್ಲಿ ಆಡಳಿತ ನಡೆಸುವ ಸಿದ್ದಾಂತವನ್ನು ಬದಲಾಯಿಸಿ ಮಹಾತ್ಮ ಗಾಂಧಿಯವರನ್ನು ಕೊಲೆ ಮಾಡಿದ ನಾಥೂರಾಮ್ ಗೋಡ್ಸೆಯವರ ಸಿದ್ದಾಂತದೊಂದಿಗೆ ಬದಲಾಯಿಸಲು ಉದ್ದೇಶಿಸಲಾಗಿದೆಯೇ ಎಂದು ಪ್ರಮೋದ್ ತಿವಾರಿ ತಿಳಿಸಿದರು.

ಭಾರತದಲ್ಲಿ ಗೋಡ್ಸೆ ಸಿದ್ದಾಂತ ತರುವ ಪ್ಲಾನ್ ಅನ್ನು ಬಿಜೆಪಿ ಮಾಡಿದೆ. ಈ ಮೂಲಕ ದೇಶದ 140 ಕೋಟಿ ಜನರಿಗೆ ಸಮಾನತೆ ಹಕ್ಕನ್ನು ನಿರಾಕರಿಸಲಾಗುತ್ತಿದೆಯೇ.? ಬಂಡವಾಳಶಾಹಿಗಳಿಗೆ ಶ್ರೀಮಂತರಿಗೆ ಮಾತ್ರ ಜಗತ್ತು ನಿರ್ಮಾಣವಾಗುತ್ತದೆಯೇ ಎಂದು ತಿವಾರಿ ಪ್ರಶ್ನಿಸಿದರು.

ಭಾರತೀಯ ಸಂವಿಧಾನ ಸಮಾಜವಾದಿ ಮತ್ತು ಗಾಂಧಿ ತತ್ವಗಳ ಅಡಿಪಾಯದಲ್ಲಿ ನಿಂತಿದೆ. ಅದನ್ನು ಯಾರೂ ಕೂಡ ಏನು ಮಾಡಲು ಸಾಧ್ಯವಿಲ್ಲ.

ಆದರೆ ಬಿಜೆಪಿ ಹಾಗೂ ಅದರ ಸೈದಂತಿಕ ಮಿತ್ರ ಪಕ್ಷಗಳು ಸಂವಿಧಾನವನ್ನು ಬದಲಾಯಿಸುವ ಮೂಲಕ ಮೀಸಲಾತಿ ಕೊನೆಗಾಣಿಸಲು ಪ್ರಯತ್ನಿಸುತ್ತಿದೆ. ಹಾಗೆ ಕೆಲವರ ಕೈಯಲ್ಲೇ ಪಕ್ಷದ ಅಧಿಕಾರವನ್ನು ಕೇಂದ್ರಿಕರಿಸಲು ಪ್ಲಾನ್ ಮಾಡುತ್ತಿದೆ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ