Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಿಯತಮನೊಂದಿಗೆ ಓಡಿಹೋಗಲು ಪತಿ ಮನೆಯಲ್ಲಿಯೇ ಕಳ್ಳತನ : ಇಬ್ಬರು ಅರೆಸ್ಟ್

Advertisement

ಬೆಳಗಾವಿ: ನವವಿವಾಹಿತೆಯೊಬ್ಬಳು ತನ್ನ ಪ್ರಿಯತಮನೊಂದಿಗೆ ಓಡಿಹೋಗಲು ಪತಿ ಮನೆಯಲ್ಲಿಯೇ ಕಳ್ಳತನ ಮಾಡಿರುವ ವಿಚಿತ್ರ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಹಸೀನಾ ಎಂಬಾಕೆ ಎರಡು ತಿಂಗಳ ಹಿಂದಷ್ಟೆ ಶರೀಫ್ ಎಂಬಾತನ ಜೊತೆ ವಿವಾಹವಾಗಿ ಗಂಡನ ಮನೆಗೆ ಬಂದಿದ್ದಾಳೆ.

ವಿವಾಹಕ್ಕೂ ಮುನ್ನವೇ ಹಸೀನಾ ಬೇರೊಬ್ಬನ ಪ್ರೀತಿಯಲ್ಲಿ ಬಿದ್ದಿದ್ದಳು.ಪ್ರಿಯಕರನ ಜೊತೆ ಎಸ್ಕೇಪ್ ಆಗಲು ಪತಿಯ ಮನೆಗೆ ಕನ್ನ ಹಾಕಿದ್ದಾಳೆ.

ಹಸೀನಾ ತನ್ನ ಪ್ರಿಯಕರ ಹಣಮಂತ ಮಾರಾಪೂರ ಜೊತೆ ಸೇರಿ ಪತಿ ಶರೀಫ್ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ.‌

ಹಸೀನಾ ಪತಿಯ ಮನೆಯಲ್ಲಿದ್ದ 21 ಲಕ್ಷ ಮೌಲ್ಯದ ‌154.6 ಗ್ರಾಂ ಚಿನ್ನಾಭರಣ. 11 ಸಾವಿರ ಮೌಲ್ಯದ 45ಗ್ರಾಂ ಬೆಳ್ಳಿಯ ಆಭರಣ ಕಳ್ಳತನ ಮಾಡಿದ್ದಾಳೆ. ಕೂಡಲೆ ಕಳ್ಳತನದ ಬಗ್ಗೆ ದಿಲಶಾದ್ ನದಾಫ್ ಎಂಬುವವರಿಂದ ಕಟಕೋಳ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಮದುರ್ಗ ಸಿಪಿಐ ವಿನಾಯಕ ಬಡಿಗೇರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಕೇವಲ 48 ಗಂಟೆಯಲ್ಲಿ ಕಳ್ಳರನ್ನು ಬಂಧಿಸಿದ್ದಾರೆ.

ಮೂಲತಃ ಮೂಡಲಗಿ ತಾಲೂಕಿನ ನಿವಾಸಿಯಾಗಿರುವ ಹಸೀನಾ ನದಾಫ್ ಕಳೆದ ಎರಡು ತಿಂಗಳ ಹಿಂದೆ ಹೊಸಕೋಟಿ ಗ್ರಾಮದ ಶರೀಫ್ ಜೊತೆ ವಿವಾಹವಾಗಿದ್ದಳು.

ಆದರೆ ಮದುವೆಯಾದ ಬಳಿಕವೂ ತನ್ನ ಪ್ರೀಯಕರ ಹಣಮಂತನ ಸಂಪರ್ಕದಲ್ಲಿದ್ದಳು. ಇಬ್ಬರೂ ಸೇರಿ ಶರೀಫ್ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು