Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಂದವಾಡಗಿ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

Advertisement
ನಂದವಾಡಗಿ :-ಬಾಗಲಕೋಟೆ ಜಿಲ್ಲೆಯ ಹುನಗುಂದ/ಇಲಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಭಾರತ ದೇಶದ ಮಾಜಿ ಪ್ರಧಾನಿಗಳು, ಸ್ವಾತಂತ್ರ್ಯ ಹೋರಾಟಗಾರರು, ನೇತಾರರು ಪಂಡಿತ ಜವಾಹರಲಾಲ್ ನೆಹರುರವರ ಜನ್ಮದಿನದ ಪ್ರಯುಕ್ತ ಮಕ್ಕಳ ದಿನಾಚರಣೆಯ ಕಾರ್ಯಕ್ರಮವನ್ನು ಅದ್ದೂರಿ, ಸಂಭ್ರಮ, ಸಡಗರದಿಂದ ಆಚರಿಸಲಾಯಿತು.

ಈ ದಿನದ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಶಾಲೆಯ ಮುಖ್ಯ ಗುರುಮಾತೆಯರು ಶ್ರೀಮತಿ ವಿ ಬಿ ಕುಂಬಾರ ರವರು ಪಂಡಿತ್ ಜವಾಹರಲಾಲ್ ನೆಹರುರವರ ವ್ಯಕ್ತಿತ್ವ ಹಾಗೂ ಸಾಧನೆಯ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಮಕ್ಕಳೆ ಅತಿಥಿಗಳ ಸ್ಥಾನವನ್ನು ಅಲಂಕರಿಸಿದ್ದು ವೇದಿಕೆಯು ಗಮನ ಸೆಳೆಯಿತು.ಮಕ್ಕಳ ದಿನಾಚರಣೆ ಪ್ರಯುಕ್ತವಾಗಿ ಶಾಲೆಯಲ್ಲಿ ವಿವಿಧ ಸ್ಪರ್ಧೆಗಳನ್ನು ಒಂದರಿಂದ ಏಳನೇ ತರಗತಿ ವಿದ್ಯಾರ್ಥಿನಿಯರಿಗೆ ಹಮ್ಮಿಕೊಳ್ಳಲಾಗಿತ್ತು.

ಪ್ರಬಂಧ, ಭಾಷಣ, ಸಹಪಠ್ಯ/ ಪಠ್ಯ ಚಟುವಟಿಕೆಗಳು, ಮನರಂಜನ ಆಟಗಳು, ನಾಟಕ, ಪಾತ್ರಾಭಿನಯ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮಕ್ಕಳ ದಿನಾಚರಣೆ ಶಾಲೆಯಲ್ಲಿ ಮಕ್ಕಳ ಗೋಷ್ಠಿ ಎಂಬ ವಿಶೇಷ ಹಾಗೂ ವಿನೂತನವಾಗಿ ಆಯೋಜನೆ ಮಾಡಲಾಗಿತ್ತು. ಮಕ್ಕಳೇ ಕವನಗಳನ್ನು ಬರೆದು ವಾಚನ ಮಾಡಿದ್ದು ವಿಶೇಷವಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಶಾಲಾ ವತಿಯಿಂದ ಬಹುಮಾನ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವರದಿ:-ದಾವಲಸಾಬ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು