LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಚಿತ್ರದುರ್ಗ ಬಸ್ ದುರಂತ : ಮೂವರು ಯುವತಿಯರು ಪಾರಾಗಿದ್ದೇ ರೋಚಕ 

Advertisement
ಚಿತ್ರದುರ್ಗ : ಚಿತ್ರದುರ್ಗದಲ್ಲಿ ನಡೆದ ಬಸ್ ದುರಂತದಲ್ಲಿ ಮೂವರು ಸ್ನೇಹಿತೆಯರು ಅದೃಷ್ಟವಶಾತ್ ಪಾರಾಗಿದ್ದಾರೆ.ಹಿರಿಯೂರು ಬಳಿ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ನೇಹಿತರು ಬದುಕುಳಿದಿದ್ದಾರೆ.ಬೆಂಗಳೂರು ಮೂಲದ ರಕ್ಷಿತಾ, ಗಗನ ಹಾಗೂ ಗೋಕರ್ಣ ಮೂಲದ ರಶ್ಮಿ ಅವಘಡದಿಂದ ಪಾರಾಗಿದ್ದಾರೆ.

ಮೂವರು ಸ್ನೇಹಿತೆಯರು ಬೆಂಗಳೂರಿನ ಡಿಲೈಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ರಜೆ ಇದ್ದ ಕಾರಣಕ್ಕೆ ಮೂವರು ಗೋಕರ್ಣಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಹೇಗೋ ‍ದುಸ್ಸಾಹಸ ಪಟ್ಟು ಬೆಂಕಿ ತಗುಲಿ ಹೊತ್ತಿ ಉರಿಯುತ್ತಿದ್ದ ಬಸ್ ನಿಂದ ಹೊರಗೆ ಜಿಗಿದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 11 ಮಂದಿ ಸಜೀವವಾಗಿದಹನಗೊಂಡಿದ್ದಾರೆ.

ಡಿವೈಡರ್ ದಾಟಿ ಬಂದ ಲಾರಿ ಸೀಬರ್ಡ್ ಖಾಸಗಿ ಸ್ಲೀಪರ್ ಕೋಚ್ ಬಸ್ ಗೆ ಡಿಕ್ಕಿ ಹೊಡೆದಿದ್ದು, 11 ಮಂದಿ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಕೆಲವೇ ಸೆಕೆಂಡುಗಳಲ್ಲಿ, ವಾಹನವು ದಟ್ಟ ಹೊಗೆ ಮತ್ತು ಎತ್ತರದ ಜ್ವಾಲೆಗಳಿಂದ ಆವೃತವಾಯಿತು, ಕ್ಯಾಬಿನ್ ಒಳಗೆ ಮಲಗಿದ್ದ ಅನೇಕ ಪ್ರಯಾಣಿಕರು ಸಿಕ್ಕಿಹಾಕಿಕೊಂಡರು. ಬಸ್ ಚಾಲಕ, ಕ್ಲೀನರ್ ಮತ್ತು ಕಂಡಕ್ಟರ್ ಪವಾಡಸದೃಶವಾಗಿ ಪಾರಾದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ