LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇಂದು ದಾವಣಗೆರೆ ಧನಿ ಶಾಮನೂರು ಶಿವಶಂಕರಪ್ಪ ನುಡಿನಮನ : ಖರ್ಗೆ, ಸಿಎಂ,ಡಿಸಿಎಂ ಭಾಗಿ

Advertisement

ದಾವಣಗೆರೆ: ಇತ್ತೀಚೆಗೆ ನಿಧನರಾದ ಶಾಸಕ, ಮಾಜಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ ಅವರ ನುಡಿ ನಮನ ಕಾರ್ಯಕ್ರಮ ಡಿಸೆಂಬರ್ 26ರಂದು ಬೆಳಗ್ಗೆ 10:15ಕ್ಕೆ ನಡೆಯಲಿದೆ.


ನೂರು ಎಕರೆ ಪ್ರದೇಶದಲ್ಲಿ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ. ದಾವಣಗೆರೆಯ ಬಂಬೂ ಬಜಾರ್ ಮುಖ್ಯ ರಸ್ತೆಯಲ್ಲಿರುವ ಶ್ರೀ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು, ಭಾಗವಹಿಸಲಿದ್ದಾರೆ.

ಪಂಚಪೀಠಾಧೀಶ್ವರರು, ಸಿರಿಗೆರೆ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಹಲವು ಶ್ರೀಗಳು ಭಾಗವಹಿಸಲಿದ್ದಾರೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ನುಡಿ ನಮನ ಕಾರ್ಯಕ್ರಮ ಆರಂಭವಾಗಲಿದೆ.

13ನೇ ದಿನದ ಕಾರ್ಯದ ಅಂಗವಾಗಿ ನಗರದ ಅನೇಕ ಕಲ್ಯಾಣ ಮಂಟಪಗಳು ಸೇರಿದಂತೆ ವಿವಿಧೆಡೆ ಸಾರ್ವಜನಿಕರು, ಅಭಿಮಾನಿಗಳಿಗೆ ಭೋಜನದ ವ್ಯವಸ್ಥೆ ಮಾಡಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಿದ್ದರಾಮಯ್ಯ ಪುತ್ಥಳಿ ಅನಾವರಣ ಮಾಡುವರು. ಡಿ.ಕೆ. ಶಿವಕುಮಾರ್ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಲಿದ್ದಾರೆ. ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಪ್ರಭಾ ಮಲ್ಲಿಕಾರ್ಜುನ್ ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕಿರು ಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ. ಬಿ.ಎಸ್. ಯಡಿಯೂರಪ್ಪ, ಕೆ.ಸಿ.ವೇಣುಗೋಪಾಲ್, ಜಗದೀಶ್ ಶೆಟ್ಟರ್, ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ