ಕಲಬುರಗಿ: ಭೂಮಿ, ವಸತಿ, ಬ್ಯಾಕ್ಲಾಗ್ ಹುದ್ದೆಗಳ ಭರ್ತಿ, ಉದ್ಯೋಗ ನೇಮಕಾತಿ, ವಿಶೇಷ ಘಟಕ ಯೋಜನೆ ಹಾಗೂ ಏಕಗವಾಕ್ಷಿ ನೀತಿ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ವತಿಯಿಂದ ಜುಲೈ 3, 2026ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಾಗೂ ಅನಿರ್ದಿಷ್ಟ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ ತಿಳಿಸಿದ್ದಾರೆ. ಶೋಷಿತ ಸಮುದಾಯಗಳ ಬಗ್ಗೆ ಸರ್ಕಾರದ ನಿರುತ್ಸಾಹ ಧೋರಣೆಯನ್ನು ಖಂಡಿಸಿ ನಡೆಯುವ ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ವರದಿ : ಹಣಮಂತ ಕುಡಹಳ್ಳಿ


