Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಎಂ ಹಿಂದುತ್ವದ ಜಪ ಮಾಡುವುದು​ ಅವರ ಭಕ್ತಿ, ವ್ಯಕ್ತಿ ಸ್ವಾತಂತ್ರ್ಯ : ಸತೀಶ್ ಜಾರಕಿಹೊಳಿ 

Advertisement
ಚಿತ್ರದುರ್ಗ : ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಿಂದುತ್ವದ ಜಪ ಮಾಡುವುದು​ ಅವರ ಭಕ್ತಿ, ವ್ಯಕ್ತಿ ಸ್ವಾತಂತ್ರ್ಯವಾಗಿದೆ. ಹೀಗಾಗಿ ಅವರು ಹಿಂದುತ್ವ ಜಪ ಮಾಡಿದರೆ ತಪ್ಪೇನಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಅಭಿಪ್ರಾಯಪಟ್ಟರು.

ಡಿಕೆಶಿ ಅವರು ಸಾಫ್ಟ್​​ ಹಿಂದುತ್ವ ಅನುಸರಿಸುತ್ತಿದ್ದಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪೂಜೆ ಮಾಡುವುದು, ಕುಂಭಮೇಳಕ್ಕೆ ಹೋಗುವುದು ಅದು ಅವರವರ ಇಷ್ಟ.ಆ ಕುರಿತು ಪ್ರಶ್ನೆ ಯಾಕೆ ಮಾಡಬೇಕು. ಅದೆಲ್ಲವೂ ಅವರಿಗೆ ಬಿಟ್ಟದ್ದು ಎಂದರು.

ಹಿಂದುತ್ವ ಜಪ ಮಾಡುವುದು, ಬಿಡುವುದು ಅವರಿಗೆ ಬಿಟ್ಟ ಸಂಗತಿಯಾಗಿದ್ದು, ಈ ಕುರಿತು ನಾನು ಮೊದಲೇ ಹೇಳಿದ್ದೇನೆ. ಭಕ್ತಿ-ಪೂಜೆ ಏನು ಮಾಡಬೇಕೋ, ಬೇಡವೋ ಎಲ್ಲವೂ ವ್ಯಕ್ತಿಯ ಸ್ವಾತಂತ್ರ್ಯ. ಯಾರೂ ಇನ್ನೊಬ್ಬರ ಧಾರ್ಮಿಕ ಆಚರಣೆ, ನಂಬಿಕೆಗಳನ್ನು ತಪ್ಪು ಎಂದು ಹೇಳುವುದು ಸಮಂಜಸವಲ್ಲ. ಅವರ ನಡೆ ಬಗ್ಗೆ ನಮ್ಮನ್ನ ಕೇಳಿದರೆ ನಾವೇನು ಹೇಳಬೇಕು. ಇನ್ನು ಮಹಾರಾಷ್ಟ್ರದ ಏಕನಾಥ್​ ಶಿಂಧೆ ಮಾದರಿಯ ನಡೆಯನ್ನು ಡಿಕೆಶಿ ಅವರು ತುಳಿಯುತ್ತಾರಾ ಎಂಬ ಪ್ರಶ್ನೆಗೆ ಅವರ ಬಳಿಯೇ ಉತ್ತರ ಕೇಳಿ ಎಂದು ತಿಳಿಸಿದರು.

ಇನ್ನು ನನ್ನ ನಂಬಿಕೆ ನಾನು ಕುಂಭ ಮೇಳಕ್ಕೆ, ಶಿವರಾತ್ರಿ ಜಾಗರಣೆಗೆ ಹೋಗಿದ್ದೆ. ನಾನು ಎಲ್ಲ ಧರ್ಮವನ್ನು ಗೌರವಿಸುತ್ತೇನೆ. ಧಾರ್ಮಿಕ ವಿಚಾರದಲ್ಲಿ ನನ್ನನ್ನು ಪ್ರಶ್ನೆ ಮಾಡುವುದು ಅಗತ್ಯವಿಲ್ಲ ಎಂದು ಡಿಕೆಶಿ ಅವರು ನಿನ್ನೆಯೇ ಸ್ಪಷ್ಟಪಡಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು