LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಬರಪೀಡಿತ ಪ್ರದೇಶಗಳನ್ನು ಘೋಷಿಸಿ, ತುರ್ತು ಪರಿಸ್ಥಿತಿ ಯೋಜನೆ ಜಾರಿಗೊಳಿಸಿ : ಆರ್. ಅಶೋಕ್ 

Advertisement

ಬೆಂಗಳೂರು: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಯುದ್ಧೋಪಾದಿಯಲ್ಲಿ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ವಿಪಕ್ಷ ನಾಯಕ ಆರ್‌.ಅಶೋಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ.

ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ರೈತರು, ಕೃಷಿ ಕಾರ್ಮಿಕರು ಹಾಗೂ ಗ್ರಾಮೀಣ ಜನತೆ ಸಂಕಷ್ಟ ಎದುರಿಸುತ್ತಿದ್ದಾರೆ.

 ಬಿತ್ತನೆ ಕಾರ್ಯಗಳು ಹಿನ್ನಡೆ ಕಂಡಿದ್ದು, ಬೆಳೆಗಳು ಒಣಗುವ ಭೀತಿ ಎದುರಾಗಿದೆ. ಜಲಾಶಯಗಳ ನೀರಿನ ಮಟ್ಟವೂ ನಿರಂತರವಾಗಿ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಗಂಭೀರ ಸ್ವರೂಪ ಪಡೆಯುವ ಆತಂಕ ಎದುರಾಗಿದೆ. 

ಸದ್ಯದ ಮಾಹಿತಿ ಪ್ರಕಾರ 150 ಕ್ಕೂ ಅಧಿಕ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಹಲವೆಡೆ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದಿದೆ. ಈಗಾಗಲೇ ಬಿತ್ತನೆಯಾದ ಬೆಳೆಗಳು ತೇವಾಂಶದ ಕೊರತೆಯಿಂದ ಒಣಗುವ ಸ್ಥಿತಿಗೆ ತಲುಪಿದೆ. 

ಇದು ಕೃಷಿ ಉತ್ಪಾದನೆಯ ಮೇಲೆ ಹಾಗೂ ಉದ್ಯೋಗದ ಮೇಲೆ ನೇರ ಪರಿಣಾಮ ಬೀರುತ್ತಿದೆ.

 ಕೃಷಿ ಕಾರ್ಮಿಕರು ನಗರಗಳತ್ತ ಹಾಗೂ ನೆರೆ ರಾಜ್ಯಗಳತ್ತ ವಲಸೆ ಹೋಗುತ್ತಿದ್ದಾರೆ ಎಂದು ಅವರು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜಲಾಶಯಗಳ ನೀರಿನ ಮಟ್ಟ ಅಪಾಯಕಾರಿಯಾಗಿ ಕುಸಿದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಇದು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೇಲೂ ಪರಿಣಾಮ ಬೀರಿದೆ. ಮುಂದೆ ಕುಡಿಯುವ ನೀರಿನ ಸಮಸ್ಯೆ ಯಾವ ಮಟ್ಟಿಗೆ ತೀವ್ರವಾಗಬಹುದು ಎಂಬುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. 

ಬಹುತೇಕ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಕುರಿತು ಸಮಗ್ರ ಪರಿಶೀಲನಾ ಸಭೆ ನಡೆಸಿಲ್ಲ, ತಾಲೂಕುಗಳಿಗೆ ಭೇಟಿ ನೀಡಿಲ್ಲ ಎಂಬುದು ದುರದೃಷ್ಟಕರ. ಕೃಷಿ ಇಲಾಖೆಗೆ ಪೂರ್ಣಾವಧಿ ಸಚಿವರೇ ಇಲ್ಲದೆ ಕಾರ್ಯನಿರ್ವಹಿಸುತ್ತಿದೆ.

 ಲಕ್ಷಾಂತರ ರೈತರ ಬದುಕಿನ ಪ್ರಶ್ನೆ ಎದುರಾಗಿರುವಾಗ, ಕೃಷಿ ಇಲಾಖೆಗೆ ನಾಯಕತ್ವ ಇಲ್ಲವಾಗಿರುವುದು ಆಡಳಿತದ ಆದ್ಯತೆಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಅವರು ದೂರಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲು