LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮರ್ಯಾದಾ ಹತ್ಯೆ ನಿಷೇಧ ಮಾನ್ಯ ಕಾಯ್ದೆ ಜಾರಿಗೆ ಆಗ್ರಹ

Advertisement
ದಲಿತ ಸಂಘ ಸಂಸ್ಥೆಗಳ ಮಹಾಮಂಡಳದಿAದ ಗಡುವು

ಹುಬ್ಬಳ್ಳಿ : ತಾಲೂಕಿನ ವೀರಾಪೂರ ಗ್ರಾಮದ ಮರ್ಯಾದೆಗೇಡು ಹತ್ಯೆ ಹಾಗೂ ದಲಿತ ದೌರ್ಜನ್ಯವನ್ನು ಖಂಡಿಸಿ ಇಂತಹ ಪ್ರಕರಣಗಳ ನಿಗ್ರಹಕ್ಕೆ ರಾಜ್ಯ ಸರ್ಕಾರ ಕಠಿಣ ಕಾನೂನು ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ವಿವಿಧ ದಲಿತ ಸಂಘ-ಸAಸ್ಥೆಗಳ ಮಹಾಮಂಡಳ ಆಗ್ರಹಿಸುತ್ತದೆಂದು ಸಮತಾಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಶಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಂದೆಯಿAದದಲೆ ಹತ್ಯೆಯಾದ ಗರ್ಭಿಣಿ ಯುವತಿಯ ಮಾನ್ಯ ಹೆಸರಿನಲ್ಲೇ 'ಮರ್ಯಾದಾಗೇಡು ಹತ್ಯೆ ನಿಷೇಧ ಮಾನ್ಯ ಕಾಯ್ದೆ' ಜಾರಿಗೆ ತರಲು ತೀವ್ರವಾದ ಹೋರಾಟ ರೂಪಿಸಲು ಸಿದ್ಧವಾಗಿ ರಾಜ್ಯ ಸರ್ಕಾರಕ್ಕೆ ಬರುವ ಅಧಿವೇಶನದಲ್ಲಿ ಈ ಕಾಯ್ದೆ ಜಾರಿಗೆ ತರಲು ಗಡುವು ನೀಡುತ್ತೇವೆ. ಈ ಒಂದು ಕಾಯ್ದೆ ಅಮಾನವೀಯ ದುಷ್ಕೃತ್ಯ, ಹತ್ಯೆ, ಹಲ್ಲೆ ದೌರ್ಜನ್ಯಗಳ ಕಡಿವಾಣವಾಗಬಹುದು ಎಂದರು.

ಹತ್ಯೆಯಾದ ಮಾನ್ಯಾ ಪತಿ ವಿವೇಕಾನಂದ ದೊಡ್ಡಮನಿ ಕುಟುಂಬಕ್ಕೆ ಕನಿಷ್ಠ ಹತ್ತು ಎಕರೆ ಭೂಮಿ, ಸರ್ಕಾರಿ ಉದ್ಯೋಗ ಮತ್ತು ದೌರ್ಜನ್ಯಕ್ಕೊಳಗಾದ ಮಕ್ಕಳಿಗೆ ಪದವಿ ವ್ಯಾಸಂಗದವರಿಗೆ ಉಚಿತ ಶಿಕ್ಷಣ ನೀಡಿ, ಸರ್ಕಾರಿ ಉದ್ಯೋಗ ಕಲ್ಪಿಸುವಂತೆ ಉಳ್ಳಿಕಾಶಿ ಆಗ್ರಹಿಸಿದರು.

ಇನಾಂವೀರಾಪುರದ ಪ್ರಕರಣದಲ್ಲಿ ಕಳೆದ ಮೇ ೨೦೨೫ರಿಂದ ಈವರೆಗಿನ ಬೆಳವಣಿಗೆಗಳನ್ನು ಗಮನಿಸಿದರೆ ಜಿಲ್ಲಾಡಳಿತ-ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗಳು ಜಾತಿ ತಾರತಮ್ಯ ಹೋಗಲಾಡಿಸಲು ಸಂಪೂರ್ಣ ನಿಷ್ಕಿçÃಯವಾಗಿದ್ದು, ಢಾಂಬಿಕ ಆಡಳಿತದಿಂದ ಈ ಜಾತಿ ಮಹಾಮಾರಿ ತೆಗೆದು ಹಾಕಲು ವಿಫಲವಾದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ವೈಫಲ್ಯದ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಂತರಾಜ ಪೋಳ, ದೇವಣ್ಣ ಇಟಗಿ, ಗುರಪ್ಪ ಚಲವಾದಿ, ಲೋಹಿತ್ ಗಾಮನಗಟ್ಟಿ, ಪ್ರಶಾಂತ ವಾಲಿ ಉಪಸ್ಥಿತರಿದ್ದರು.

ವರದಿ : ಸುಧೀರ್ ಕುಲಕರ್ಣಿ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ