Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಷ್ಟ್ರದಲ್ಲಿ ತ್ರಿಭಾಷಾ ಸೂತ್ರ ಜಾರಿ ಮಾಡುವುದಿಲ್ಲ : ದೇವೇಂದ್ರ ಫಡ್ನವೀಸ್

Advertisement

ಮುಂಬೈ : ಮಹಾರಾಷ್ಟ್ರದಲ್ಲಿ ಹಿಂದಿ ಹೇರಿಕೆ ಹಾಗೂ ತ್ರಿಭಾಷಾ ಸೂತ್ರ ಜಾರಿ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ತ್ರಿಭಾಷಾ ಸೂತ್ರ ಜಾರಿ ಮಾಡುವುದಿಲ್ಲ ಎಂದಿದ್ದಾರೆ.


ಮಹಾರಾಷ್ಟ್ರ ಸರ್ಕಾರ ಇಂದು ತ್ರಿಭಾಷಾ ನೀತಿಯ ಕುರಿತಾದ ಸರ್ಕಾರಿ ನಿರ್ಣಯಗಳನ್ನು ರದ್ದುಗೊಳಿಸಿದೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾಷಾ ಸೂತ್ರ ಅನುಷ್ಠಾನದ ಕುರಿತು ಸಮಿತಿ ರಚಿಸಿದ್ದಾರೆ.

ಪದೇ ಪದೇ ತ್ರಿಭಾಷಾ ಸೂತ್ರದ ಬಗ್ಗೆ ಮಾತನಾಡುವ ಉದ್ಧವ್ ಠಾಕ್ರೆ, 1ನೇ ತರಗತಿಯಿಂದ ತ್ರಿಭಾಷಾ ನೀತಿಯನ್ನು ಜಾರಿಗೆ ತರುವ ಕುರಿತು ಮಾಶೇಲ್ಕರ್ ಸಮಿತಿಯ ಸಲಹೆಗಳನ್ನು ಒಪ್ಪಿಕೊಂಡಿದ್ದರು' ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಿಡಿಕಾರಿದ್ದಾರೆ.

ಜೂನ್ 27 ರ ಶುಕ್ರವಾರದಂದು, ಮರಾಠಿ ಭಾಷೆಗೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡುವ ಭಾಷಾ ಸಲಹಾ ಸಮಿತಿಯು, ಹಿಂದಿ ಸೇರಿದಂತೆ ಯಾವುದೇ ಮೂರನೇ ಭಾಷೆಯನ್ನು 5ನೇ ತರಗತಿಯ ಮೊದಲು ಕಲಿಸಬಾರದು ಎಂದು ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿದೆ.

ತ್ರಿಭಾಷಾ ಸೂತ್ರಕ್ಕೆ ಮಿತ್ರಪಕ್ಷಗಳ ವಿರೋಧ

ವಿಧಾನಸಭೆಯ ಮುಂಗಾರು ಅಧಿವೇಶನದ ಮುನ್ನಾದಿನ ಮಾತನಾಡಿರುವ ಡಿಸಿಎಂ ಅಜಿತ್ ಪವಾರ್, 'ಒಂದನೇ ತರಗತಿಯಿಂದಲೇ ಹಿಂದಿ ಕಲಿಕೆ ಕಡ್ಡಾಯಗೊಳಿಸುವ ಕ್ರಮವನ್ನು ಬೆಂಬಲಿಸುವುದಿಲ್ಲ. ಆದರೆ, 5ನೇ ತರಗತಿಯಿಂದ ಮೂರನೇ ಭಾಷೆ ಆಯ್ಕೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ತೀರ್ಮಾನಿಸಬಹುದು' ಎಂದಿದ್ದಾರೆ. ಹಾಗೆಯೇ, '1ನೇ ತರಗತಿಯಿಂದ ನಾವು ಹಿಂದಿ ಹೇರಿಕೆ ಪರವಾದ ನಿಲುವು ಹೊಂದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

'ಹಿಂದಿ ಭಾಷೆ ಕಲಿಕೆ ಕಡ್ಡಾಯವಿಲ್ಲ. ಆಯಾ ರಾಜ್ಯದ ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯನ್ನು ಕಲಿಯಬೇಕು ಎಂಬುದರಲ್ಲಿ ನಂಬಿಕೆ ಹೊಂದಿದ್ದೇವೆ. ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಓದುವವರು ಮರಾಠಿ ಭಾಷೆ ಕಲಿಯುವುದು ಕಡ್ಡಾಯವಾಗಿದೆ.

ಐದನೇ ತರಗತಿಯಿಂದ ಹಿಂದಿ ಕಲಿಯುವ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಆಲೋಚಿಸಿ, ನಿರ್ಧಾರ ಕೈಗೊಳ್ಳಬೇಕು' ಎಂದು ಪವಾರ್ ಹೇಳಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು