LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸಚಿವಾಕಾಂಕ್ಷಿಗಳಿಗೆ ನಿರಾಸೆ : ಸಂಪುಟ ವಿಸ್ತರಣೆ ಮುಂದೂಡಿಕೆ 

Advertisement

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ದಿಢೀರ್ ತಡೆ ಬಿದ್ದಿದೆ.

ಬುಧವಾರವೇ ನೂತನ ಸಚಿವರ ಪ್ರಮಾಣವಚನ ಸಮಾರಂಭ ನೆರವೇರಲಿದೆ ಎಂಬ ವದಂತಿಗಳ ನಡುವೆಯೇ, ಪ್ರಕ್ರಿಯೆಯನ್ನು ಇನ್ನೂ ಎರಡು-ಮೂರು ದಿನಗಳ ಕಾಲ ಮುಂದೂಡಲು ನಿರ್ಧರಿಸಲಾಗಿದೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರ ಲಭ್ಯತೆ ಇಲ್ಲದಿರುವುದೇ ಈ ವಿಳಂಬಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಸದ್ಯ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ರಾಜಧಾನಿ ಬೆಂಗಳೂರಿಗೆ ವಾಪಸಾಗುತ್ತಿದ್ದು, ವಾರಾಂತ್ಯದಲ್ಲಿ ಮತ್ತೊಮ್ಮೆ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಅಂತಿಮ ಹಂತದ ಮಾತುಕತೆ ನಡೆಸಲಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಂಗಳವಾರ ತಡರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಬಂಧನದ ಹಠಾತ್ ಬೆಳವಣಿಗೆಗಳು ಸಂಪುಟ ವಿಸ್ತರಣೆಯ ಮೇಲೆ ಪ್ರಭಾವ ಬೀರಿವೆ ಎಂದಿದ್ದಾರೆ. 

ಸರ್ಕಾರದ ಮಟ್ಟದಲ್ಲಿ ಪ್ರಕ್ರಿಯೆಯನ್ನು ಅನಗತ್ಯವಾಗಿ ಮುಂದೂಡುವ ಇಚ್ಛೆಯಿಲ್ಲದಿದ್ದರೂ, ಹೈಕಮಾಂಡ್ ಸೂಚನೆಯಂತೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST