LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು ಸಹಾಯವಾಣಿ ಪ್ರದರ್ಶನ ಕಡ್ಡಾಯ

Advertisement

ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇ-ಸ್ವತ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರದರ್ಶಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.


ಇ-ಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು, ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ರಾಜ್ಯದ ಗ್ರಾಮ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು.

ಗ್ರಾಮೀಣ ಜನರು ಈ ಯೋಜನೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರಿದ್ದು, ಸಾರ್ವಜನಿಕರಿಂದ ಬರುವ ದೂರುಗಳ ಬಗ್ಗೆ ವಿಶೇಷ ಆಸಕ್ತಿವಹಿಸಿ ಬಗೆಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇ-ಸ್ವತ್ತು ತಂತ್ರಾಂಶದಲ್ಲಿನ ಕೆಲವು ಲೋಪಗಳ ಬಗ್ಗೆ ಕೆಲವು ಸಿಇಒಗಳೊಂದಿಗೆ ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಈ ಸಮಸ್ಯೆಗಳನ್ನು ಪರಿಹರಿಸಬೇಕೆಂದು ನಿರ್ದೇಶಿಸಲಾಗಿದೆ. ತಂತ್ರಾಂಶವನ್ನು ಎನ್.ಐ.ಸಿ ಸಿದ್ಧಪಡಿಸಿದ್ದು ಲೋಪಗಳನ್ನು ಸರಿಪಡಿಸಲು ಸೂಚಿಸಲಾಗಿದೆ.

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇ-ಸ್ವತ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರದರ್ಶಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.ಇ-ಸ್ವತ್ತು ಬಗ್ಗೆ ಬರುವ ಯಾವುದೇ ದೂರುಗಳನ್ನು ಆದ್ಯತೆಯ ಮೇಲೆ ಪರಿಹರಿಸಿ ಅರ್ಜಿದಾರರಿಗೆ ಮಾಹಿತಿ ನೀಡಬೇಕೆಂದು ನಿರ್ದೇಶಿಸಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ