LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಸಮಾಧಾನ ವರಿಷ್ಠರು ಬಗೆಹರಿಸುವರು: ಪಶ್ಚಿಮ ನಿಯೋಜಿತ ಅಭ್ಯರ್ಥಿ ಲಿಂಬಿಕಾಯಿ ಹೇಳಿಕೆ

Advertisement
ಹುಬ್ಬಳ್ಳಿ: ೨೦೨೬ರ ಕರ್ನಾಟಕ ಪಶ್ಚಿಮ ಪದವೀಧರ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಎಲ್ಲ ಅಭಿಪ್ರಾಯ ಪಡೆದು ನನಗೆ ಟಿಕೆಟ್ ನೀಡಲಾಗಿದೆ. ಕುಬೇರಪ್ಪನವರ ಅಸಮಾಧಾನವನ್ನು ಪಕ್ಷದ ವರಿಷ್ಠರು , ಮುಖಂಡರು ಬಗೆಹರಿಸಲಿದ್ದಾರೆ ಎಂದು ಪಶ್ಚಿಮ ಪದವೀಧರ ಮತಕ್ಷೇತ್ರದ ನಿಯೋಜಿತ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಪದವೀಧರ ಮತಕ್ಷೇತ್ರವು ಧಾರವಾಡ, ಹಾವೇರಿ, ಉತ್ತರ ಕನ್ನಡ, ಗದಗ ಜಿಲ್ಲೆಯನ್ನು ಒಳಗೊಂಡಿದೆ. ಅದರಲ್ಲಿ ಧಾರವಾಡ ಜಿಲ್ಲೆಯಲ್ಲಿ ೩೮ ಸಾವಿರ, ೨೮ ಸಾವಿರ ಹಾವೇರಿ, ೧೯ ಸಾವಿರ ಗದಗ ಜಿಲ್ಲೆ, ೧೫ ಸಾವಿರ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರಿದ್ದಾರೆ. ಇದರಲ್ಲಿ ೫೧ ಸಾವಿರ ಪುರುಷ ಮತದಾರರಿದ್ದು, ೩೫ ಸಾವಿರ ಮಹಿಳಾ ಮತದಾರರಿದ್ದಾರೆ. ಆದರೆ ಮತದಾರರ ಪಟ್ಟಿಯಲ್ಲಿ ಹೆಚ್ಚು ಮಹಿಳಾ ಮತದಾರರು ತಿರಸ್ಕಾರಗೊಂಡಿದ್ದಾರೆ. ಇದಕ್ಕೆ ಅವರ ವಿಳಾಸದ ದಾಖಲಾತಿ ಸೇರಿದಂತೆ ಇನ್ನಿತರ ಕಾರಣಗಳಿವೆ. ಹೀಗಾಗಿ ಈ ಬಗ್ಗೆ ಮತದಾರರು ಜಾಗೃತಗೊಂಡು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದರು.
ಕಳೆದ ಬಾರಿ ೯೪ ಸಾವಿರ ಮತದಾರರಿದ್ದು, ಇದರಲ್ಲಿ ೨೨ ಸಾವಿರ ಬಿಜೆಪಿ ಅಭ್ಯರ್ಥಿ ಮತವನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ೧೩ ಸಾವಿರ ಮತಗಳನ್ನು ಪಡೆದಿದ್ದರು, ಇದಲ್ಲದೇ ಬಂಡಾಯ ಅಭ್ಯರ್ಥಿ ೬ ಸಾವಿರ ಮತಗಳನ್ನು ಪಡೆದುಕೊಂಡು, ಸುಮಾರು ೮ ಸಾವಿರಕ್ಕೂ ಅಧಿಕ ಮತಗಳು ಕುಲಗೆಟ್ಟ ಮತಗಳಾಗಿದ್ದವು. ಇವೆಲ್ಲವನ್ನೂ ನೋಡಿದಾಗ ಬಿಜೆಪಿ ವಿರೋಧಿ ಅಲೆ ನಮಗೆ ಕಂಡು ಬಂದಿದೆ. ಈ ದಿಸೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸುಲಭವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈಗಾಗಲೇ ಪದವೀಧರರ ಸಂಪರ್ಕದಲ್ಲಿದ್ದು ಪ್ರತಿ ಜಿಲ್ಲೆಯಲ್ಲೂ ಸಂಚಾರ ಮಾಡಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಎಂ.ಎಸ್.ಅಕ್ಕಿ, ಡಾ.ಲಿಂಗರಾಜ ಅಂಗಡಿ, ಅನಿಲಕುಮಾರ ಪಾಟೀಲ, ಹುಡಾ ಅಧ್ಯಕ್ಷ ಶಾಕೀರ ಸನದಿ ಮುಂತಾದವರಿದ್ದರು.

ವರದಿ: ಸುಧೀರ್ ‌ಕುಲಕರ್ಣಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ