LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ 

Advertisement

ಬೆಂಗಳೂರು: ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟುಮಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ (Public places) ಪಾರಿವಾಳಗಳಿಗೆ (Pigeons) ಆಹಾರ ಹಾಕುವುದನ್ನು (food) ನಿಯಂತ್ರಿಸಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ, ಜನರಿಗೆ ತೊಂದರೆ ಅಥವಾ ಆರೋಗ್ಯ ಸಮಸ್ಯೆ ಉಂಟಾಗುವ ಪ್ರದೇಶಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಷೇಧಿಸುವಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ.

ಪಾರಿವಾಳಗಳ ಮಲ ಹಾಗೂ ಗರಿಗಳಿಂದ ಉಸಿರಾಟ ಸಂಬಂಧಿತ ಕಾಯಿಲೆಗಳು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಅಗತ್ಯವಿದ್ದರೆ ಮಾನ್ಯತೆ ಪಡೆದ ಸ್ವಯಂಸೇವಾ ಸಂಸ್ಥೆಗಳ ಮೇಲ್ವಿಚಾರಣೆಯಲ್ಲಿ ಮಾತ್ರ ನಿಗದಿತ ಸ್ಥಳಗಳಲ್ಲಿ ಮತ್ತು ನಿಗದಿತ ಸಮಯದಲ್ಲಿ ಆಹಾರ ನೀಡಲು ಅವಕಾಶ ಕಲ್ಪಿಸಬಹುದು ಎಂದು ಸರ್ಕಾರ ತಿಳಿಸಿದೆ. 

ನಿಯಮ ಉಲ್ಲಂಘಿಸಿದವರ ವಿರುದ್ಧ ಸ್ಥಳದಲ್ಲೇ ಎಚ್ಚರಿಕೆ, ದಂಡ ಹಾಗೂ ಅಗತ್ಯವಿದ್ದರೆ ಭಾರತೀಯ ನ್ಯಾಯ ಸಂಹಿತೆಯಡಿ ಕಾನೂನು ಕ್ರಮ ಜರುಗಿಸಲು ಸೂಚಿಸಲಾಗಿದೆ.

ಈ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೇರಿದಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಮಾರ್ಗಸೂಚಿ ಜಾರಿಗೊಳಿಸಬೇಕು ಎಂದು ಆರೋಗ್ಯ ಇಲಾಖೆ ನಿರ್ದೇಶಿಸಿದೆ. 

ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಇದರ ಅನುಷ್ಠಾನ ಕುರಿತು ಮುಂದಿನ ದಿನಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST