LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್‌ ರಾಂ ಜಯಂತಿ ಆಚರಣೆ.

Advertisement
ಸಿರುಗುಪ್ಪ : ನಗರದ ತಾಲೂಕು ಕ್ರೀಡಾಂಗಣದ ಆವರಣದಲ್ಲಿ ನಡೆದ ಭಾರತರತ್ನ ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ, ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ 119ನೇ ಕಾರ್ಯಕ್ರಮವನ್ನು ಶಾಸಕ ಬಿ.ಎಮ್.ನಾಗರಾಜ ಅವರು ಭಾವಚಿತ್ರಗಳಿಗೆ ಪುಷ್ಪಾರ್ಚನೆಗೈದು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ತಾಲೂಕಾಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ, ತಹಶೀಲ್ದಾರ್ ಗೌಸಿಯಾ ಬೇಗಂ ಅವರು ದೇಶಕಂಡ ಮಹಾನ್ ಚೇತನ ಅಂಬೇಡ್ಕರರ ಜಯಂತಿಯ ಈ ದಿನವನ್ನು ಜ್ಞಾನ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹಬ್ಬವಾಗಿ ಗೌರವಯುತವಾಗಿ ನಮ್ಮ ತಾಲೂಕಿನಲ್ಲಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ತಾಲೂಕು ಕ್ರೀಡಾಂಗಣದವರೆಗೂ ರಾಜಬೀದಿಯಲ್ಲಿ ನಡೆದ ಭವ್ಯ ಮೆರವಣಿಗೆಯಲ್ಲಿ ಸುಮಂಗಲೆಯರು ಕಳಸವನ್ನು ಹೊತ್ತು ಮೆರಗು ತಂದರು. ವಿವಿಧ ವಾದ್ಯಗಳೊಂದಿಗೆ ಯುವಕರು ನೀಲಿ ಬಾವುಟಗಳನ್ನು ಹಿಡಿದು ಜೈಭೀಮ್ ಎಂದು ಜೈಕಾರ ಹಾಕುತ್ತಾ ಸಾಗಿದರು.

ಕಾರ್ಯಕ್ರಮದಲ್ಲಿ ಸಂವಿಧಾನ ಪ್ರತಿಜ್ಞಾವಿಧಿ ಭೋಧನೆ ಮಾಡಲಾಯಿತು. ಚಂದ್ರಶೇಖರ್, ದೊಡ್ಡ ಹುಸೇನಪ್ಪ ಅವರ ಸಂಗಡಿಗರಿಂದ ನಾಡಗೀತೆ ಮತ್ತು ಪ್ರತಿಜ್ಞಾಗೀತೆ ಗಾಯನ ಜರುಗಿತು.

ತೆಕ್ಕಲಕೋಟೆಯ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕರಾದ ದೊಡ್ಡಬಸಪ್ಪ ಹೆಚ್ ಅವರು ಮುಖ್ಯ ಭಾಷಣವನ್ನು ನೀಡಿದರು.

ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಇನ್ನಿತರ ಸಮುದಾಯಗಳ ತಾಲೂಕಾಧ್ಯಕ್ಷರು ವೇದಿಕೆಯನ್ನು ಹಂಚಿಕೊಂಡು ಕಾರ್ಯಕ್ರಮದ ಯಶಸ್ವಿಗೆ ಕಾರಣೀಭೂತರಾದರು.

ಇದೇ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು, ಹಾಗೂ ಸಾರ್ವಜನಿಕರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ