LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಹಬ್ಬದ ಸಂದರ್ಭದಲ್ಲಿ ಘನಘೋರ ಕೃತ್ಯ : ಪತ್ನಿ ಕೊಂದು ಪತಿ ಆತ್ಮಹತ್ಯೆ 

Advertisement
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಮಂಜು (27) ಕೊಲೆಯಾದ ಪತ್ನಿ ಧರ್ಮಶೀಲನ್ (29) ಆತ್ಮಹತ್ಯೆಗೆ ಶರಣಾದ ಪತಿ ಎಂದು ತಿಳಿದುಬಂದಿದೆ.ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲೆಯಾದ ಮಹಿಳೆ ತಂದೆ ದೂರು ನೀಡಿದ್ದು, ಪೆರಿಯಸ್ವಾಮಿ ಅವರು ಮೂಲತಃ ತಮಿಳುನಾಡಿನವರು. ನಗರದ ಉಲ್ಲಾಳು ಮುಖ್ಯರಸ್ತೆಯಲ್ಲಿ ಕುಟುಂಬಸಮೇತ ವಾಸವಾಗಿದ್ದಳು.

ಇವರ ನಾಲ್ವರು ಹೆಣ್ಣು ಮಕ್ಕಳ ಪೈಕಿ ಎರಡನೇ ಮಗಳಾದ ಮಂಜು ಅವರಿಗೆ 2022ರಲ್ಲಿ ಧರ್ಮಶೀಲನ್ ಎಂಬಾತನೊಂದಿಗೆ ಮದುವೆ ಮಾಡಲಾಗಿತ್ತು.

ಮದುವೆಯ ಬಳಿಕ ಧರ್ಮಶೀಲನ್ ದುಬೈನಲ್ಲಿ ಕೆಲಸ ಮಾಡುತ್ತಿದ್ದರೆ, ಮಂಜು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಸೆ.28ರಂದು ನನ್ನ ತಂಗಿಯ ಮಗ ಪ್ರಶಾಂತ್ ಜೊತೆ ಮಗಳ ಮನೆಗೆ ಹೋದಾಗ ಬಾಗಿಲು ಹಾಕಿತ್ತು. ನಿರಂತರವಾಗಿ ಬಾಗಿಲು ಬಡಿದರೂ ಪ್ರತಿಕ್ರಿಯೆ ಬರದ ಕಾರಣ ಮತ್ತೊಂದು ಕೀ ಮೂಲಕ ಬೀಗ ತೆರೆದು ಒಳಗೆ ಪ್ರವೇಶಿಸಿದಾಗ ಮಗಳು ರಕ್ತದ ಮಡುವಿನಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದರೆ, ಧರ್ಮಶೀಲನ್ ಸೀಲಿಂಗ್ ಫ್ಯಾನ್ಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಹಾಗಾಗಿ, ನನ್ನ ಮಗಳು ಹಾಗೂ ಅಳಿಯ ಸಾವನ್ನಪ್ಪಿರುವ ಸಂಬಂಧ ತನಿಖೆ ನಡೆಸಬೇಕು ಎಂದು ಪೆರಿಯಸ್ವಾಮಿ ದೂರಿನಲ್ಲಿ ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ