LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ತೊಗರಿ ಬೇಳೆಗೆ ಗೊಡ್ಡು ರೋಗ ಬಂದು ಬೆಳೆಹಾನಿ: ಸೂಕ್ತ ಪರಿಹಾರಕ್ಕೆ ರೈತರ ಆಕ್ರೋಶ

Advertisement
ಸೇಡಂ: ತಾಲೂಕಿನ ಸಿಲಾರಕೋಟ್ ಗ್ರಾಮದ ಸುಮಾರು 4500ಎಕರೆ ಭೂಮಿ ಇದ್ದು ಅದರಲ್ಲಿ ಅರ್ಧಕ್ಕಿಂತ ಹೆಚ್ಚು ಭೂಮಿಯಲ್ಲಿ ರೈತರು ಬೆಳೆದಿರುವ ತೊಗರಿ ಬೇಳೆಗೆ ಗೊಡ್ಡು ರೋಗ ಬಂದು ರೈತರು ಕಂಗಾಲಾಗಿದ್ದಾರೆ.

ಓಬೊಬ್ಬ ರೈತರ ಭೂಮಿ 3ಎಕರೆಗಿಂತ ಹೆಚ್ಚು ಭೂಮಿಯಲ್ಲಿ ರೈತರು ತೊಗರಿ ಬೇಳೆ ಬೆಳೆದಿದ್ದು ಮೂರರಿಂದ ನಾಲ್ಕು ಬಾರಿ ಔಷಧಿ ಸಿಂಪರಣೆ ಕೂಡ ಮಾಡಿದ್ದಾರೆ ಆದರೆ ಯಾವುದೇ ಪ್ರಯೋಜನವಿಲ್ಲದೆ ಬೇಳೆ ಸಂಪೂರ್ಣ ಹಾಳಾಗಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇದೀಗ ಸರಕಾರವು ರೈತರಿಗೆ ನೀಡಿರುವ ಬೆಳೆಹಾನಿ ಪರಿಹಾರವು ಕನಿಷ್ಠ ಅವರು ತಂದಿರುವ ಔಷಧಿ ಖರ್ಚಿಗೆ ಕೂಡ ಸಾಲುತ್ತಿಲ್ಲ ಅದರಲ್ಲೂ ಕೆಲವು ರೈತರಿಗೆ ಪರಿಹಾರ ಇನ್ನೂ ಸಿಕ್ಕಿಲ್ಲ.

ಸಿಲಾರಕೋಟ್ ಗ್ರಾಮದ ರೈತರ ಸಂಕಷ್ಟಕ್ಕೆ ಸರಕಾರವು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಂಡು ಸುಮಾರು ಒಂದು ಎಕರೆಗೆ 25000ಸಾವಿರ ರೂಪಾಯಿ ರೈತರಿಗೆ ಬೆಳೆಹಾನಿ ಪರಿಹಾರ ನೀಡಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ರೈತ ಭೀಮಪ್ಪ ಪೊಟ್ಟಿ ಅವರು ಮಾತನಾಡಿ ಈ ಭಾಗದ ರೈತರು ತೊಗರಿ ಬೇಳೆಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ ರೈತರಪಾಲಿಗೆ ದೈವಸ್ವರೂಪಿಯಾಗಿರುವ ತೊಗರಿ ಬೆಳೆಯು ಈ ವರ್ಷ ಅತಿಯಾದ ಮಳೆಯಿಂದ ಗೊಡ್ಡು ರೋಗ ಬಂದು ಒಬ್ಬೊಬ್ಬ ರೈತ ಸುಮಾರು 5ಎಕರೆಗಿಂತ ಹೆಚ್ಚು ತೊಗರಿ ಬೇಳೆ ಬೆಳೆದಿದ್ದು ಮೂರರಿಂದ ನಾಲ್ಕು ಬಾರಿ ಔಷಧಿ ಸಿಂಪರಣೆ ಮಾಡಿದರೂ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನೊಂದ ರೈತರಿಗೆ ಸರಿಯಾದ ಪರಿಹಾರ ನೀಡಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಶ್ರೀನಿವಾಸ್ ಪೊಟ್ಟಿ, ಭೀಮಪ್ಪ ಪೊಟ್ಟಿ, ಪ್ರವೀಣ್ ಕಲಾಲ್, ನರೇಶ್ ರೆಡ್ಡಿ ಅಬ್ಬನಿ, ಸಾಯಿಲು ಪೂಜಾರಿ, ಶಿರಿಷ್ ರೆಡ್ಡಿ, ಸುರೇಂದ್ರ ಕಲಾಲ್, ಚಿನ್ನ ಬಾಲಯ್ಯಾ ತಲಾರಿ ಸೇರಿದಂತೆ ಇನ್ನಿತರರು ರೈತ ಮುಖಂಡರು ಭಾಗಿಯಾಗಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ