LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಸಿ. ಜೆ ರಾಯ್ ಆತ್ಮಹತ್ಯೆ ಪ್ರಕರಣ : ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ

Advertisement
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಡಾ.ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡಲಾಗಿದೆ.ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಕೂಡ ಈ ತಂಡದಲ್ಲಿ ಇರಲಿದ್ದಾರೆ ಎಂದು ತಿಳಿಸಿದರು.

ಸಿ.ಜೆ.ರಾಯ್ ಆತ್ಮಹತ್ಯೆಗೆ ನಿಖರ ಕಾರಣಗಳೇನು? ಐಟಿ ದಾಳಿಗೆ ಹೆದರಿ ಆತ್ಮಹತ್ಯೆ ಎಂದು ಹೇಳಲಾಗುತ್ತಿದೆ. ನಿಜಕ್ಕೂ ಐಟಿ ದಾಳಿ ಒತ್ತಡದಿಂದಲೇ ಆತ್ಮಹತ್ಯೆಗೆ ಶರಣಾದರೇ? ಅಥವಾ ಅವರ ಸಾವಿಗೆ ಬೇರೆ ಏನಾದರೂ ಕಾರಣವಿದೆಯೇ? ಡಿಸೆಂಬರ್ ನಲ್ಲಿಯೇ ಐಟಿ ದಾಳಿ ನಡೆದಿತ್ತು.

ಐಟಿ ಅಧಿಕಾರಿಗಳ ವಿಚಾರಣೆ ಈಗಲೂ ಮುಂದುವರೆದಿತ್ತೇ? ರಾಯ್ ಅವರ ಆತ್ಮಹತ್ಯೆ ಬಗ್ಗೆ ಸಂಪೂರ್ಣ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಬೇಕಿದೆ. ಹಾಗಾಗಿ ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ವಹಿಸಲಾಗುವುದು ಎಂದು ಹೇಳಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST