LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮಾಜಿ ಸಚಿವ, ಶತಾಯುಷಿ ಡಾ. ಭೀಮಣ್ಣ ಖಂಡ್ರೆ ವಿಧಿವಶ : ಅವರು ನಡೆದು ಬಂದ ಹಾದಿ 

Advertisement
ಬೀದರ್: ಮಾಜಿ ಸಚಿವ, ವೀರಶೈವ ಮಹಾಸಭಾ ಗೌರವ ಅಧ್ಯಕ್ಷರಾಗಿದ್ದ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ವಿಧಿವಶರಾಗಿದ್ದಾರೆ.

ಆರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿ ಜನಪರ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿದ್ದ ಭಾಲ್ಕಿ ಕ್ಷೇತ್ರದ ಹಿರಿಯರಾದ ಭೀಮಣ್ಣ ಖಂಡ್ರೆ(103) ವಯೋಸಹಜ ಅನಾರೋಗ್ಯದ ಕಾರಣ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಉಸಿರಾಟದ ತೊಂದರೆ ಹಾಗೂ ರಕ್ತದೊತ್ತಡದಲ್ಲಿ ಏರುಪೇರಾಗಿದ್ದ ಕಾರಣದಿಂದ ಬೀದರ್ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದ ಅವರು, ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ಕರೆದುಕೊಂಡು ಹೋಗಲಾಗಿತ್ತು.

ಡಾ.ಭೀಮಣ್ಣ ಖಂಡ್ರೆ ಅವರ ಪುತ್ರ ಈಶ್ವರ್ ಖಂಡ್ರೆ ಅವರು ಪ್ರಸ್ತುತ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಮೊಮ್ಮಗ ಸಾಗರ್ ಖಂಡ್ರೆ ಅವರು ಬೀದರ್ ಜಿಲ್ಲೆಯ ಸಂಸದರಾಗಿದ್ದಾರೆ.

ನಡೆದು ಬಂದ ಹಾದಿ

1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ರಾಜಕೀಯ ಜೀವನಕ್ಕೆ ಪ್ರವೇಶಿಸಿದ್ದ ಭೀಮಣ್ಣ ಖಂಡ್ರೆ ಅವರು 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು. 4 ಬಾರಿ ಶಾಸಕರಾಗಿ, 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎಂ.ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಸಹಕಾರಿ ಧುರೀಣರಾಗಿ ಮತ್ತು ರೈತರ ಕಲ್ಯಾಣದ ಬಗ್ಗೆ ಕಳಕಳಿ ಹೊಂದಿದ್ದ ಭೀಮಣ್ಣ ಖಂಡ್ರೆ ಅವರು ಹಳ್ಳಿಖೇಡ್ ನಲ್ಲಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಹುಣಜಿಯಲ್ಲಿರುವ ಮಹಾತ್ಮಾ ಗಾಂಧೀ ಸಕ್ಕರೆ ಕಾರ್ಖಾನೆಯ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ನಾರಂಜಾ ಮತ್ತು ಕಾರಂಜಾ ನೀರಾವರಿ ಯೋಜನೆಗಳ ಅನುಷ್ಠಾನದಲ್ಲೂ ಭೀಮಣ್ಣ ಖಂಡ್ರೆ ಅವರು, ಪ್ರಮುಖ ಪಾತ್ರ ವಹಿಸಿದ್ದರು. ಸ್ವಾತಂತ್ರ್ಯ ಸೇನಾನಿಯಾಗಿ, ಹೈದ್ರಾಬಾದ್ ವಿಮೋಚನೆಯ ಹೋರಾಟಗಾರರಾಗಿ ರಜಾಕಾರರ ದೌರ್ಜನ್ಯ ಪ್ರತಿಭಟಿಸಿದ್ದ ಅವರು, ಏಕೀಕರಣದ ಸಂದರ್ಭದಲ್ಲಿ ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲಿಯೇ ಉಳಿಸಲು ಶ್ರಮಿಸಿದ್ದರು. ಅವರ ತಮ್ಮ ಈ ಕೊಡುಗೆಗಾಗಿ ಸುವರ್ಣ ಏಕೀಕರಣ ರಾಜ್ಯ ಪ್ರಶಸ್ತಿಗೂ ಅವರು ಭಾಜನರಾಗಿದ್ದರು.

ಶಾಂತಿವರ್ಧಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಜಿಲ್ಲೆಯ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ದೊರಕಿಸಲು ಬೀದರ್ ನಲ್ಲಿ ಅಕ್ಕಮಹಾದೇವಿ ಕಾಲೇಜು, ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ ಸಾವಿರಾರು ಯುವಜನರ ಭವಿಷ್ಯ ರೂಪಿಸಿದ್ದರು. ತಮ್ಮ ಸ್ವಕ್ಷೇತ್ರ ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಸಲುವಾಗಿ ಸಚಿವ ಸ್ಥಾನವನ್ನೇ ತ್ಯಾಗ ಮಾಡಿದ್ದರು.

ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯವನ್ನು ಒಗ್ಗೂಡಿಸುವಲ್ಲಿ ಶ್ರಮಿಸಿದ ಅವರು ಕೆಲವೇ ಸಾವಿರ ಇದ್ದ ಸಭಾದ ಸದಸ್ಯತ್ವವನ್ನು ಲಕ್ಷಕ್ಕೆ ತೆಗೆದುಕೊಂಡು ಹೋಗುವ ಮೂಲಕ ತಮ್ಮ ಸಂಘಟನಾ ಸಾಮರ್ಥ್ಯ ಪ್ರದರ್ಶಿಸಿದ್ದರು.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ