LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇನಾಂ ವೀರಾಪುರ ಗ್ರಾಮಕ್ಕೆ ಕರ್ನಾಟಕ ಏಕತಾ ಮಿಷನ್ ಸಂಸ್ಥಾಪಕ ಅಧ್ಯಕ್ಷ ಭೇಟಿ

Advertisement
ಹುಬ್ಬಳ್ಳಿ :ಇನಾಂ ವೀರಾಪುರ ಗ್ರಾಮಕ್ಕೆ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಸ್ಥಾಪಕರಾದ ಮತ್ತಿನ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹುಸನಪ್ಪ ಚಲವಾದಿ ಭೇಟಿ ತಾಲ್ಲೂಕಿನ ಇನಾಮ್ ವೀರಾಪುರ ಗ್ರಾಮದಲ್ಲಿ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿಯಾದ ಮಾನ್ಯ ಪಾಟೀಲ ಅವರ ಅಮಾನವೀಯ ಮರ್ಯಾದೆ ಹತ್ಯೆ ನಾಗರಿಕ ಸಮಾಜದ ಮನಸ್ಸನ್ನು ಕಲುಷಿತಗೊಳಿಸಿದ ಭೀಕರ ಕೃತ್ಯವಾಗಿದೆ. ಈ ಕ್ರೂರ ಘಟನೆಗೆ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ತೀವ್ರ ಖಂಡನೆಯನ್ನು ವ್ಯಕ್ತಪಡಿಸುತ್ತದೆ.

ಇಂದು ಸಂತ್ರಸ್ತ ಕುಟುಂಬದ ಮನೆಗೆ ಭೇಟಿ ನೀಡಿ, ಅವರ ನೋವಿಗೆ ಸ್ಪಂದಿಸಿ ಸಾಂತ್ವನ ಹೇಳುವ ಮೂಲಕ ನೈತಿಕ ಬೆಂಬಲವನ್ನು ಸೂಚಿಸಲಾಯಿತು. ಈ ಸಂದರ್ಭದಲ್ಲಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ರಾಜ್ಯ ಸಂಸ್ಥಾಪಕರಾದ ಮತ್ತಿನ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹುಸನಪ್ಪ ಚಲವಾದಿ, ವಿಜಯಪುರ ಜಿಲ್ಲಾಧ್ಯಕ್ಷರಾದ ಮಾರುತಿ ಕುದುರಿ, ಜಮಖಂಡಿ ತಾಲೂಕ ಅಧ್ಯಕ್ಷರಾದ ಪುಂಡಲಿ ಕಾಂಬಳೆ ಸೇರಿದಂತೆ ಸಂಘಟನೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದು, ಸಂತ್ರಸ್ತ ಕುಟುಂಬದ ಜೊತೆ ನಿಲ್ಲುವ ಭರವಸೆಯನ್ನು ವ್ಯಕ್ತಪಡಿಸಿದರು.

ಮಾನವೀಯತೆ, ಸಮಾನತೆ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ಮೇಲೆ ನಡೆದ ಈ ದಾಳಿ ಕ್ಷಮಾರ್ಹವಲ್ಲ. ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಇಂತಹ ಅಮಾನವೀಯ ಕೃತ್ಯಗಳು ಮರುಕಳಿಸದಂತೆ ಸರ್ಕಾರ ಮತ್ತು ಸಮಾಜ ಎಚ್ಚೆತ್ತುಕೊಳ್ಳಬೇಕು ಎಂಬುದು ನಮ್ಮ ದೃಢ ನಿಲುವಾಗಿದೆ.
ವರದಿ :ಗುರುರಾಜ ಹಂಚಾಟೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ